Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಡಿ ರದ್ದತಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ.9 ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿ ಗ್ರಾಮಕ್ಕೆ ಮಂಜೂರು ಮಾಡಲಾಗಿದ್ದ ಜಮೀನಿಗೆ ಅಕ್ರಮವಾಗಿ ಪೋಡಿ ಮಾಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರವಾಸಿ ಮಂದಿರದಿಂದ ಪ್ರಾರಂಭ ಮಾಡಿ ಕೆಇಬಿ ವೃತ್ತ, ಜೆಸಿ ವೃತ್ತದ ಮೂಲಕ ತಾಲೂಕು ಕಚೇರಿವರೆಗೆ ಕಾಲ್ನಡಿಗೆಯಲ್ಲಿ ಬಂದು ತಹಸೀಲ್ದಾರ್ ವಿಜಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸಂಚಾಲಕ ಮಂಜುನಾಥ್ ಅಣ್ಣಯ್ಯ ಮಾತನಾಡಿ. ಖಾಜಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಗೆ ಸೇರಿದ ಸರ್ವೇ ನಂಬರ್ 6ಲ್ಲಿ ಒಟ್ಟು 26 ನಿವಾಸಿಗಳು ಸಾಗುವಳಿ ಚೀಟಿ ಪಡೆದುಕೊಂಡಿರುತ್ತಾರೆ. ಆದರೆ, ಹಳೆಯ ಸರ್ವೇ ನಂಬರ್ 6 ಹೊಸ ಸರ್ವೆ ನಂಬರ್ 103ರಲ್ಲಿ 1 ಎಕರೆ 20ಗುಂಟೆ ಜಮೀನನ್ನು ರಾಜಕೀಯ ಪ್ರಭಾವ ಬಳಸಿ ವೆಂಕಟೇಶಪ್ಪ ಎಂಬುವವರಿಗೆ ಕಾನೂನು ಬಾಹಿರವಾಗಿ ಮಂಜೂರು ಮಾಡಿ ಪೋಡಿ ಮಾಡಲಾಗಿದೆ ಎಂದು ಆರೋಪಿಸದರು.

ಇದು ಕಾನೂನು ಬಾಹಿರವಾಗಿದ್ದು ಕೂಡಲೆ ಪೋಡಿ ರದ್ದು ಮಾಡಬೇಕಿದೆ. ಪ್ರಮುಖವಾಗಿ ಮಂಜೂರು ಮಾಡಿ ಪೋಡಿ ಮಾಡಿರುವ ಜಾಗ ಕಲ್ಲು ಬಂಡೆಗಳಿಂದ ಕೂಡಿದ್ದು, ಕೃಷಿಗೆ ಯೋಗ್ಯವಾದ ಜಮೀನು ಆಗಿರುವುದಿಲ್ಲ. ಇವರು ಗ್ರಾಮದ ವ್ಯಕ್ತಿ ಆಗಿಲ್ಲದಿದ್ದರೂ ಸಹ ಅಕ್ರಮವಾಗಿ ಪೋಡಿ ಮಾಡಿ, ವ್ಯವಸಾಯಕ್ಕೆ ಯೋಗ್ಯ ಭೂಮಿಯಲ್ಲಿ ಸುಮಾರು 75 ರಿಂದ 80 ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ಪಲಾನುಭವಿಗಳಿಗೆ ಪೋಡಿ ಮಾಡದಿರುವುದು ಖಂಡನೀಯ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ