Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನತಾದರ್ಶನ ಸ್ವೀಕೃತ ಅರ್ಜಿಗಳನ್ನು ತ್ವರಿತ ಇತ್ಯರ್ಥಕ್ಕೆ ಡಿಸಿ ಸೂಚನೆ

ಸುದ್ದಿಮೂಲ ವಾರ್ತೆ

ತುಮಕೂರು, ಸೆ.26: ಜಿಲ್ಲೆಯಲ್ಲಿ ಆಶ್ರಯ ಯೋಜನೆಗೆ 761 ಎಕರೆ ಜಾಗವನ್ನು ಗುರುತಿಸಿ ಸರ್ವೇಯನ್ನು ಮಾಡಲಾಗಿದ್ದು, ಈ ಜಾಗವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡು ನರೇಗಾ ಯೋಜನೆಯ ಅನುದಾನವನ್ನು ಬಳಸಿಕೊಂಡು ವಸತಿ ಬಡಾವಣೆ ನಿರ್ಮಾಣ ಮಾಡುವುದಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ತುಮಕೂರು ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಅ. 2ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನಿವೇಶನ ರಹಿತರಿಗೆ ನಿವೇಶನಗಳನ್ನು ಕೊಟ್ಟರೆ ಅವರು ಸರ್ಕಾರದ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುತ್ತದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರದಿಂದ 2ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಿಸಲು ಕಂದಾಯ ನಿರೀಕ್ಷಕರುಗಳು ಜಾಗವನ್ನು ಗುರುತಿಸಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉದ್ಯಾನವನ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಪ್ರತಿನಿತ್ಯ ವಾಯು ವಿಹಾರಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ 819 ಅರ್ಜಿಗಳು ಸ್ವೀಕೃತಿಯಾಗಿದ್ದು, ಅದರಲ್ಲಿ ಶೇ. 50ರಷ್ಟು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಲೇವಾರಿ ಮಾಡಲಾಗುವುದು. ಕಂದಾಯ ಇಲಾಖೆಗೆ ಸಂಬAಧಿಸಿದ ಕಡತಗಳನ್ನು ಈ ಆಫೀಸ್ ಮೂಲಕವೇ ವಿಲೇವಾರಿ ಮಾಡಬೇಕು. ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ