Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು,ಆ.18:ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜೊತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸ ಹಾಗೂ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿ ಶಿವಕುಮಾರ್ ಅವರು ಹೀಗೆ ಹೇಳಿದರು.

"ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ. ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ. ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ ಎಂದರು.

ಈ ಹಿಂದೆ ಇಂತಹ ಪರಿಸ್ಥಿತಿಯಲ್ಲಿ ಜನತಾ ದಳ ಹಾಗೂ ಬಿಜೆಪಿ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದವು ಎಂಬ ಅಂಕಿ ಅಂಶ ನೀಡಬಲ್ಲೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಕಾವೇರಿ, ಮಹಾದಾಯಿ, ಕೃಷ್ಣಾ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಆಲೋಚಿಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರದಲ್ಲಿದ್ದರೂ ಮಹಾದಾಯಿ, ಕೃಷ್ಣ ವಿಚಾರ ಇತ್ಯರ್ಥವಾಗಿಲ್ಲ. ಈ ಬಗ್ಗೆಯೂ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡುತ್ತೇವೆ" ಎಂದು ತಿಳಿಸಿದರು.

ಜನರಿಗೆ ಕೊಟ್ಟ ಮಾತಿನಂತೆ ಎನ್ಇಪಿ ರದ್ದು:

ಎನ್ಇಪಿ ರದ್ದು ವಿಚಾರವಾಗಿ ಕೇಳಿದ ಪ್ರಶ್ನೆಗೆ, "ನಾವು ಎನ್ಇಪಿ ಜಾರಿ ಆರಂಭದಲ್ಲೇ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರದ್ದು ಮಾಡುವುದಾಗಿ ಹೇಳಿದ್ದೆವು. ಈಗ ಆ ಬಗ್ಗೆ ಚಿಂತನೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ಬಹಳ ತರಾತುರಿಯಲ್ಲಿ ಮೂಲಸೌಕರ್ಯ ಇಲ್ಲದೆ ಇದನ್ನು ಜಾರಿಗೆ ತಂದಿತ್ತು. ಈ ಎನ್ಇಪಿಯನ್ನು ಕೇವಲ ಕರ್ನಾಟಕದಲ್ಲಿ ಮಾತ್ರ ಯಾಕೆ ಜಾರಿ ಮಾಡಿದರು? ಬಿಜೆಪಿ ಸರ್ಕಾರ ಇರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಹರ್ಯಾಣ ಹಾಗೂ ಗುಜರಾತ್ ನಲ್ಲಿ ಯಾಕೆ ಮಾಡಲಿಲ್ಲ? ನಮ್ಮಲ್ಲಿರುವ ಶಿಕ್ಷಣ ವ್ಯವಸ್ಥೆ ಸರಿ ಇರಲಿಲ್ಲವೇ? ಇಡೀ ಪ್ರಪಂಚದಲ್ಲಿನ ಜನ ಬೆಂಗಳೂರನ್ನು ಐಟಿ, ಶಿಕ್ಷಣ ರಾಜಧಾನಿ, ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತಾರೆ. ನಮ್ಮಲ್ಲಿರುವ ಶಿಕ್ಷಣ ಗುಣಮಟ್ಟ ಇದಕ್ಕೆ ಕಾರಣ. ಎನ್ಇಪಿಯಲ್ಲಿ ಉತ್ತಮ ಅಂಶ ಇದ್ದರೆ ಅದನ್ನು ಪರಿಗಣಿಸುತ್ತೇವೆ. ಇದು ಬಿಜೆಪಿಯ ರಾಜಕೀಯ ಅಜೆಂಡಾ. ಎನ್ಇಪಿ ಎಂದರೆ ನಾಗಪುರ ಶಿಕ್ಷಣ ನೀತಿ ಆಗಿದೆ. ಶಿಕ್ಷಣ ರಾಜ್ಯ ವ್ಯಾಪ್ತಿ ವಿಚಾರವೇ ಹೊರತು ಕೇಂದ್ರ ಸರ್ಕಾರದ ವಿಚಾರವಲ್ಲ" ಎಂದು ತಿಳಿಸಿದರು.

ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ಕಾರ್ಯಕರ್ತರಿಗೆ ಸಂದೇಶ:

ಬೇರೆ ಪಕ್ಷದವರು ಕಾಂಗ್ರೆಸ್ ಸೇರುವ ವಿಚಾರವಾಗಿ ಕೇಳಿದಾಗ, "ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದೇವೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದ್ದೇನೆ. ಉಳಿದಂತೆ ನನ್ನವರೆಗೂ ಯಾರದೇ ಪಕ್ಷ ಸೇರ್ಪಡೆ ವಿಚಾರ ಬಂದಿಲ್ಲ" ಎಂದು ತಿಳಿಸಿದರು.

ನೀವು ಬೇರೆ ಪಕ್ಷದ ಶಾಸಕರ ಜೊತೆ ಖುದ್ದಾಗಿ ಮಾತನಾಡಿದ್ದೀರಿ ಎಂಬ ಮಾತಿದೆಯಲ್ಲ ಎಂದು ಕೇಳಿದಾಗ, "ನಿಮ್ಮ ಮಾಹಿತಿ ಸಂಪೂರ್ಣ ಸುಳ್ಳು. ಬಿಜೆಪಿಯವರು ಯಾರ ಜೊತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಅವರು ಕಲಿಸಿ ಕೊಟ್ಟಿರುವ ಪಾಠ ನಮಗೆ ನೆನಪಿದೆ. ಜನ ನಮಗೆ 135 ಸಂಖ್ಯಾಬಲ ನೀಡಿದ್ದಾರೆ. ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಬಿಜೆಪಿ ಹಾಗೂ ದಳದವರಿಗೆ ನೆಮ್ಮದಿ ಇಲ್ಲ. ಅದಕ್ಕೆ ಅವರೇ ಔಷಧಿ ಕಂಡುಕೊಳ್ಳಬೇಕು. ಗೆದ್ದಿರುವವರು, ಸೋತಿರುವವರು ಮಾತನಾಡುತ್ತಿದ್ದಾರೆ. ಯಾರು ಏನು ಮಾತನಾಡುತ್ತಿದ್ದಾರೆ ಎಂದು ನಾವು ಗಮನಿಸುತ್ತಿದ್ದೇವೆ. ನಾವು ಯಾರ ಮಾತಿಗೂ ಬೀಗ ಹಾಕುವುದಿಲ್ಲ" ಎಂದು ತಿಳಿಸಿದರು.

ಬಿಜೆಪಿ ನಾಯಕರು ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, "ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ಸಾಬೀತುಪಡಿಸಲು ಅವರು ಪ್ರಯತ್ನಿಸುತ್ತಿದ್ದಾರೆ" ಎಂದು ತಿಳಿಸಿದರು.

ಜೆಡಿಎಸ್ ನ 13 ಶಾಸಕರು ನಿಮ್ಮ ಸಂಪರ್ಕದಲ್ಲಿದ್ದು, ಮುಂದೆ ಅವರು ನಿಮಗೆ ಬೆಂಬಲ ನೀಡಲಿದ್ದಾರೆ ಎಂಬ ಮಾಹಿತಿ ಇದೆಯಲ್ಲ ಎಂಬ ಪ್ರಶ್ನೆಗೆ, "ಈ ವಿಚಾರ ನನಗೆ ಗೊತ್ತಿಲ್ಲ. ನಿಮ್ಮಿಂದಲೇ ಈಗ ಮಾಹಿತಿ ಕೇಳುತ್ತಿದ್ದೇನೆ. ನನಗೆ 224 ಶಾಸಕರು ಪರಿಚಯಸ್ಥರು. ಎಲ್ಲರ ಜತೆ ರಾಜಕೀಯವಾಗಿ ಅಲ್ಲದಿದ್ದರೂ ವೈಯಕ್ತಿಕ ಸಂಬಂಧ ಇದೆ. ಅವರ ಹೆಸರಿಗೆ ನಾವು ಧಕ್ಕೆ ಯಾಕೆ ತರೋಣ?" ಎಂದು ತಿಳಿಸಿದರು.

ಪಕ್ಷ ಬಿಟ್ಟು ಹೋದವರು ಬಂದರೆ ಪಕ್ಷದ ಬಾಗಿಲು ತೆರೆದಿರುತ್ತದೆಯೇ ಎಂದು ಕೇಳಿದಾಗ, "ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು" ಎಂದು ತಿಳಿಸಿದರು.

40% ಕಮಿಷನ್ ವಿಚಾರ ತನಿಖೆಗೆ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಬಗ್ಗೆ ಕೇಳಿದಾಗ, "ಈ ವಿಚಾರವಾಗಿ ನಾನು ಏನನ್ನೂ ಹೇಳುವುದಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಉತ್ತರ ನೀಡಲಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತನಿಖೆಗೆ ಸಮಿತಿ ರಚನೆ ಮಾಡಿದ್ದು, ಅವರು ತನಿಖೆ ಮಾಡುತ್ತಿದ್ದಾರೆ" ಎಂದು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ