Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ವಾರದಲ್ಲಿ ಕೆಂಪೇಗೌಡ ಲೇಔಟ್ ಗೆ ಭೇಟಿ ಮಾಡಿ ಸಮಸ್ಯೆ ಪರಿಶೀಲನೆ ಮಾಡುತ್ತೇನೆ; ಡಿಸಿಎಂ

ಬೆಂಗಳೂರು:ಕೆಂಪೇಗೌಡ ಲೇಔಟ್ ನಲ್ಲಿ ಮೂಲಭೂತ ಸೌಕರ್ಯ ಕೊರತೆ ವಿಚಾರವಾಗಿ ಮುಂದಿನ ವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ಕೆಂಪೇಗೌಡ ಲೇಔಟ್ ನಿವಾಸಿಗಳ ನಿಯೋಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

"ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕೆಂಪೇಗೌಡ ಬಡವಾಣೆ ನಿರ್ಮಾಣಕ್ಕೆ ಮುಂದಾಗಿದ್ದು, 4040 ಎಕರೆಯಲ್ಲಿ ಈ ಬಡಾವಣೆ ನಿರ್ಮಾಣ ಮಾಡುವ ದೊಡ್ಡ ಯೋಜನೆ ಆಗಿದೆ. ಈ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದ್ದು, ನೀವುಗಳು ಮುಂದೆ ನಿಂತು ಯೋಜನೆ ಪೂರ್ಣಗೊಳಿಸಬೇಕು.

ಈ ಯೋಜನೆಗೆ ಇನ್ನು 1400 ಎಕರೆ (ಯೋಜನೆ 30%) ಭೂ ಸ್ವಾಧೀನ ಬಾಕಿ ಇದೆ. ಇದರಲ್ಲಿ 600 ಎಕರೆ ಭೂ ಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಉಳಿದಂತೆ ಸರ್ಕಾರಿ ಜಮೀನು ಸ್ವಾಧೀನಕ್ಕೆ ಯಾವುದೇ ಆಸಕ್ತಿ ತೋರುತ್ತಿಲ್ಲ. ಕಂದಾಯ ಭೂಮಿ ಪಡೆಯಲು ಕಂದಾಯ ಇಲಾಖೆ ಜೊತೆ ಸಮನ್ವಯ ಮಾಡಲಾಗುತ್ತಿಲ್ಲ. ಸ್ವಹಿತಾಸಕ್ತಿಗಾಗಿ ಈ ಭೂ ಸ್ವಾಧೀನ ಮಾಡುತ್ತಿಲ್ಲ.

ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ, ಸರ್ವೇಯರ್ ಹಾಗೂ ಇಂಜಿನಿಯರ್ ಗಳ ಕೊರತೆ ಇದೆ. ಎಲ್ಲಾ ಸಿಬ್ಬಂದಿಗಳನ್ನು ಶಿವರಾಮ ಕಾರಂತ ಬಡಾವಣೆ ಕಾಮಗಾರಿಗೆ ನಿಯೋಜಿಸಲಾಗಿದೆ ಎಂದು ಹೇಳುತ್ತಾರೆ.

ಈ ಬಡವಾಣೆಯಲ್ಲಿ ಕೇವಲ 30-50 ಆಡಿ ರಸ್ತೆಗಳು ಮಾತ್ರ ಇವೆ. ಇವುಗಳ ಡಾಂಬರೀಕರಣಕ್ಕೆ ಟೆಂಡರ್ ಕೂಡ ಕರೆದಿಲ್ಲ.

4 ಸಾವಿರ ಎಕರೆ ಬಡಾವಣೆಗೆ ಒಂದೇ ಒಂದು ಆಟದ ಮೈದಾನ ಇಲ್ಲ. ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಲ್ಲ.

ಈ ಬಡಾವಣೆಗೆ ಪರಿಸರ ಇಲಾಖೆ ಅನುಮತಿ ಪಡೆಯುವಾಗ ಪಾರ್ಕ್ ಮತ್ತು ಮುಕ್ತ ಪ್ರದೇಶಕ್ಕೆ 600 ಎಕರೆ ಮೀಸಲಿಡುತ್ತೇವೆ ಎಂದು ಹೇಳಿದ್ದು, ಇದರ ಉಲ್ಲಂಘನೆ ಆಗಿದೆ. ಕಳೆದ 13 ವರ್ಷಗಳಲ್ಲಿ 2694 ಎಕರೆ ಮಾತ್ರ ಭೂಸ್ವಾಧೀನ ಮಾಡಲಾಗಿದೆ.

2016ರಿಂದ ಇಲ್ಲಿಯವರೆಗೆ 26 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, 10 ಸಾವಿರ ನಿವೇಶನಗಳನ್ನು ಎರಡು ಹಂತದಲ್ಲಿ ಸಾರ್ವಜನಿಕರಿಗೆ ನೀಡಿದ್ದು, ರೈತರಿಗೆ 12 ಸಾವಿರ ನಿವೇಶನ, 3-4 ಸಾವಿರ ನಿವೇಶನ ಅರ್ಕಾವತಿ ಬಡಾವಣೆ ಫಲಾನುಭವಿಗಳಿಗೆ ಇಲ್ಲಿ ಹಂಚಿಕೆ ಮಾಡಲಾಗಿದೆ. ಇನ್ನು 3 ಸಾವಿರ ಕಾರ್ನರ್ ನಿವೇಶನ ಹರಾಜು ಹಾಕಿದ್ದಾರೆ.

ಯಾವುದೇ ಮೂಲ ಸೌಕರ್ಯ ನೀಡದ ಪರಿಣಾಮ 7 ವರ್ಷಗಳ ಹಿಂದೆ ನಿವೇಶನ ಪಡೆದರೂ ಮನೆ ಕಟ್ಟಲು ಆಗುತ್ತಿಲ್ಲ.

ಕೋವಿಡ್ ಬಂದ ನಂತರ ಈ ಬಡಾವಣೆ ಮೂಲಸೌಕರ್ಯ ನಿರ್ಮಾಣದಲ್ಲಿ ಯಾವುದೇ ಪ್ರಗತಿ ಆಗಿಲ್ಲ.

ಇನ್ನು ಸಿಎ ನಿವೇಶನಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಸಿಎ ನಿವೇಶನಗಳನ್ನು ಬೇರೆಯವರಿಗೆ ಹಂಚಿಕೆ ಮಾಡಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಸಿಎ ನಿವೇಶನಕ್ಕಾಗಿ 350 ಎಕರೆ ಜಾಗ ಮೀಸಲು ಇಡಬೇಕಾಗಿತ್ತು. ಈಗ ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶದಲ್ಲಿ ಸಿಎ ನಿವೇಶನಗಳಿಗೆ ಅಷ್ಟು ಜಾಗ ಮೀಸಲು ಇಟ್ಟಿಲ್ಲ. ಇನ್ನು ಈ ಯೋಜನೆಯಲ್ಲಿ ಬಫರ್ ಜೋನ್ ನಿಯಮ ಪಾಲನೆ ಆಗಿಲ್ಲ" ಎಂದು ತಿಳಿಸಿದರು.

ನಂತರ ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿಗಳು, "ನೀವು ಆಘಾತಕಾರಿ ಅಂಶಗಳನ್ನು ಹೇಳುತ್ತಿದ್ದೀರಿ. 4 ಸಾವಿರ ಎಕರೆ ಬಡಾವಣೆಯಲ್ಲಿ ಒಂದು ಆಟದ ಮೈದಾನ ಇಲ್ಲ ಎನ್ನುತ್ತಿದ್ದಾರೆ. ನಾನು ಮುಂದಿನ ವಾರ ಕೆಂಪೇಗೌಡ ಬಡಾವಣೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ಮಾಡುತ್ತೇನೆ" ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ