Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗೆ ನೂತನ 2 ರೈಲು ಪ್ರಾರಂಭಿಸಲು ಆಗ್ರಹ

ಕಲಬುರಗಿ, ಜು.4: ಕಲಬುರಗಿ ನಗರದಿಂದ ಬೆಂಗಳೂರಿಗೆ ಹೊಸ 2 ರೈಲು ಪ್ರಾರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪುನೀತರಾಜ್ ಕವಡೆ ನೇತೃತ್ವದಲ್ಲಿ ನಗರದ ರೈಲು ನಿಲ್ದಾಣದಲ್ಲಿ ಎದುರು ಪ್ರತಿಭಟನೆ ನಡೆಸಿ ರೇಲ್ವೆ ಮುಖ್ಯ ಪ್ರಬಂಧಕರ ಮೂಲಕ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ಜಿಲ್ಲೆ ಹಾಗೂ ನಗರವು ತುಂಬಾ ಬೃಹದಾಕಾರವಾಗಿ ಬೆಳೆದಿದ್ದು, ಜನಸಂಖ್ಯೆಯಲ್ಲಿಯೂ ಕೂಡಾ ಏರಿಕೆಯಾಗಿದ್ದು, ಸದ್ಯ ಚಲಿಸುವ ರೈಲುಗಳಲ್ಲಿ ಸ್ಥಳಾವಕಾಶ ವಿಲ್ಲದೇ ಬೆಂಗಳೂರಿಗೆ ಹೋಗಲು ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅದರಂತೆ ಬೆಂಗಳೂರಿಗೆ ಹೋಗಲು ಕಲಬುರಗಿಯಿಂದ ಸಾಕಷ್ಟು ಜನ ವ್ಯಾಪಾರಿಗಳೂ, ರಾಯಕೀಯ ವ್ಯಕ್ತಿಗಳು, ಐಟಿಬಿಟಿ ಉದ್ಯೋಗಿಗಳು ಹಾಗೂ ಇನ್ನಿತರರು ಗಣನೀಯವಾಗಿ ಹೋಗುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಪ್ರಯಾಣಿಸಲು ತುಂಬಾ ತೊಂದರೆಯಾಗುತ್ತಿದೆ.

ಅದರಂತೆ ಹಗಲು ಹೊತ್ತಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಲು ಕೇವಲ ಒಂದು ರೈಲು ಇದ್ದು. ಅದು ಕೂಡಾ ತುಂಬಾ ಜನದಟ್ಟಣೆಯಿಂದ ಕೂಡಿರುತ್ತದೆ.

ಆದ್ದರಿಂದ ನಮ್ಮ ಮನವಿ ಪತ್ರವನ್ನು ಪರಿಗಣಿಸಿ, ಕೂಡಲೇ ಕಲಬುರಿಗಿಯಿಂದ ಬೆಂಗಳೂರಿಗೆ ನೂತನ 2 ರೈಲು ( ಒಂದು ಬೆಳಿಗ್ಗೆ ಹಾಗೂ ಒಂದು ರಾತ್ರಿ) ಕೂಡಲೇ ಪ್ರಾರಂಭಿಸಲು ಕ್ರಮ ಕೈಕೊಳ್ಳಬೇಕು. ಒಂದು ವೇಳೆ ನಮ್ಮ ಮನವಿಯನ್ನು 1 ತಿಂಗಳ ಒಳಗಾಗಿ ಪರಿಗಣಿಸದೇ ಇದ್ದರೆ ಸಂಘಟನೆ ವತಿಯಿಂದ ರೈಲು ನಿಲ್ದಾಣದಲ್ಲಿ ರೈಲು ರೋಕೊ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಈರಣ್ಣಾ ಅಲ್ದೆ, ನಿಸಾರ ಅಹ್ಮದ್, ಕಲ್ಯಾಣಿ ತಳವಾರ, ಧರ್ಮಸಿಂಗ ತಿವಾರಿ, ಉಸ್ಮಾನ ಸಾಬ್, ವಿಠ್ಠಲ ಪೂಜಾರಿ, ದೇವಿಂದ್ರ, ಶರಣಪ್ಪ, ಶಿವಲಿಂಗ, ಅಲ್ಲಿಸಾಬ್, ಶೋಭಾ, ಮಲ್ಲಿಕಾರ್ಜುನ, ಪ್ರಭು ಸೇರಿದಂತೆ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ