Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಳೆ ಬೆಳೆಯ ಬೆಳೆ ನಿರ್ವಹಣೆ ಪ್ರಾತ್ಯಕ್ಷಿಕೆ

ಸುದ್ದಿಮೂಲ ವಾರ್ತೆ

ತಿಪಟೂರು, ಜು 13 : ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಬಾಳೆ ಬೆಳೆಯ ಸಮಗ್ರ ಬೆಳೆ ನಿರ್ವಹಣೆ ಕುರಿತು ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೃಷಿ ವಿಸ್ತರಣಾ ವಿಜ್ಞಾನಿ ಎಂ.ಇ. ದರ್ಶನ್ ಮಾತನಾಡಿ, ಮುಂಚೂಣಿ ಪ್ರಾತ್ಯಕ್ಷಿಕೆಯು

ನೋಡಿ ತಿಳಿ, ಮಾಡಿ ಕಲಿ ತತ್ವವನ್ನು ಆಧರಿಸಿದ್ದು, ತಂತ್ರಜ್ಞಾನದ ಮೌಲ್ಯವನ್ನು

ಬೋಧಿಸಲು ಹಾಗೂ ರೈತರಿಗೆ ಮನದಟ್ಟಾಗುವಂತೆ ಮಾಡಲು ಉಪಯೋಗಿಸುವ ವಿಸ್ತರಣಾ ಭೋಧನ ವಿಧಾನ. ಈ ಪ್ರಾತ್ಯಕ್ಷಿಕೆಯು ವಿಜ್ಞಾನಿಗಳ ಮೇಲ್ವಿಚಾರಣೆಯಲ್ಲಿ ನಡೆಸಲಾಗುವ ಒಂದು ಫಲಿತಾಂಶ ಪ್ರಾತ್ಯಕ್ಷಿಕೆಯಾಗಿದೆ ಎಂದರು.

ಪ್ರಾತ್ಯಕ್ಷಿಕೆಗಳಲ್ಲಿ ಆ ತಂತ್ರಜ್ಞಾನಗಳ ಮೌಲ್ಯ ಮತ್ತು ಸ್ಥಳೀಯ ಅನ್ವಯಿಕತೆ ಪ್ರದರ್ಶಿಸಲು ಒಂದು ನಿರ್ದಿಷ್ಟ ಪರಿಸರದಲ್ಲಿ ನಡೆಸಲಾಗುವುದು. ಈ ಪ್ರಾತ್ಯಕ್ಷಿಕೆಗಳನ್ನು ತಮ್ಮದೇ

ಪರಿಸರದಲ್ಲಿ ನಡೆಸುವುದರಿಂದ ವಿಸ್ತರಣಾ ಕಾರ್ಯಕರ್ತರಿಗೆ ಹಾಗೂ ರೈತರಿಗೆ ತಂತ್ರಜ್ಞಾನಗಳ ಕಾರ್ಯಕ್ಷಮತೆಯನ್ನು ನೇರವಾಗಿ ನೋಡುವ ಹಾಗೂ ವಿಜ್ಞಾನಿಗಳೊಂದಿಗೆ ಸಮಾಲೋಚಿಸಿ ಮನದಟ್ಟು ಮಾಡಿಕೊಳ್ಳುವ ಅವಕಾಶವಿರುತ್ತದೆ ಎಂದರು.

ತೋಟಗಾರಿಕಾ ವಿಜ್ಞಾನಿ ಡಾ. ಕೆ. ಕೀರ್ತಿಶಂಕರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ಬಾಳೆ ಬೆಳೆಗಳನ್ನು ವಾಣಿಜ್ಯವಾಗಿ ಬೆಳೆಯುತ್ತಿದ್ದಾರೆ. ಬಾಳೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ, ರಸವಾರಿ ಕಂದುಗಳ ನಿರ್ವಹಣೆ, ಅಂಗಾಂಶ ಬಾಳೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೆರೆದಿದ್ದ ರೈತರಿಗೆ ಬಾಳೆ ಸ್ಪೆಷಲ್ ಸಿಂಪಡಣೆಯ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಗೃಹ ವಿಜ್ಞಾನಿಗಳಾದ ಡಾ. ನಿತ್ಯಶ್ರೀ, ಕೃಷಿ ಹವಮಾನ ಶಾಸ್ತ್ರದ ವಿಷಯ ತಜ್ಞ ಡಾ. ಪದ್ಮನಾಭನ್ ಸೇರಿದಂತೆ ರೈತರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ