Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕ್ಯಾನಿಂಗ್ ವೈದ್ಯರು 2 ಸೆಂಟರ್‌ಗಳಿಗೆ ತೆರಳಲು ಮಾತ್ರ ಅವಕಾಶ : ಡಿಹೆಚ್‌ಓ

ಸುದ್ದಿಮೂಲ ವಾರ್ತೆ

ತುಮಕೂರು, ಸೆ.14: ಉಚ್ಛ ನ್ಯಾಯಾಲಯದ ತೀರ್ಪಿನನ್ವಯ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಆಯಾ ಜಿಲ್ಲೆಯ 2 ಸ್ನಿಂಗ್ ಸೆಂಟರ್‌ಗಳಿಗೆ ಮಾತ್ರ ಭೇಟಿ ನೀಡಲು ಅವಕಾಶವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಎನ್. ಮಂಜುನಾಥ ಹೇಳಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗಪತ್ತೆ ಹಚ್ಚುವ ತಂತ್ರಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರೇಡಿಯೋಲಜಿಸ್ಟ್, ಸೋನೋಲಜಿಸ್ಟ್, ಸ್ಕ್ಯಾನಿಂಗ್ ವೈದ್ಯರು ತಾವು ಭೇಟಿ ನೀಡುವ ಸ್ಕ್ಯಾನಿಂಗ್ ಸೆಂಟರ್ ಹಾಗೂ ಭೇಟಿ ಸಮಯವನ್ನು ಕಡ್ಡಾಯವಾಗಿ ಎಂಪ್ಯಾನಲ್ ಮಾಡಿಸಬೇಕು. ಎಂಪ್ಯಾನಲ್ ಮಾಡದಿರುವ ಹಾಗೂ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ನು ಉಲ್ಲಂಘಿಸುವ ವೈದ್ಯರ ಮೇಲೆ ಕಾನೂನು ರೀತಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ನಿರ್ದೇಶನ ನೀಡಿದರು.

ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ವಯ ಗರ್ಭಾವಸ್ಥೆಯಲ್ಲಿರುವ ಲಿಂಗಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ. ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ನೋಂದಣಿ ಪ್ರಮಾಣಪತ್ರವನ್ನು ವ್ಯವಹಾರ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಹಾಗೂ ಫಾರಂ-ಎಫ್, ಎ.ಎನ್.ಸಿ ನೋಂದಣಿ ಪುಸ್ತಕ, ಸ್ಕ್ಯಾನಿಂಗ್ ಇಮೇಜ್‌ಗಳು, ನಗದು ಪುಸ್ತಕ, ಸ್ಕ್ಯಾನಿಂಗ್ ವರದಿ, ರೆಫರಲ್ ಸ್ಲಿಪ್ ಸೇರಿದಂತೆ ಮತ್ತಿತರ ಅಗತ್ಯ ದಾಖಲಾತಿಗಳನ್ನು ನಿರ್ವಹಣೆ ಮಾಡಬೇಕು. ಎಲ್ಲಾ ಸ್ಕ್ಯಾನಿಂಗ್‌ ಸೆಂಟರ್‌ಗಳು ತಪ್ಪದೇ ಕಾಲಕಾಲಕ್ಕೆ ನೋಂದಣಿ ಮಾಡಿಸತಕ್ಕದ್ದು ಎಂದು ಅವರು ಸೂಚನೆ ನೀಡಿದರು.

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಸೂಕ್ತ ಕಟ್ಟಡ, ಉತ್ತಮ ಗಾಳಿ, ಬೆಳಕು, ಶೌಚಾಲಯ ವ್ಯವಸ್ಥೆ ಹೊಂದಿರಬೇಕು. ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಸಭೆಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳ ಹೆಸರು ಬದಲಾವಣೆ, ಹೊಸ ಸ್ಕ್ಯಾನಿಂಗ್ ಯಂತ್ರ, ‌ ಖರೀದಿಗೆ ಎನ್‌ಓಸಿ ನೀಡುವ ಸಂಬಂಧ ಸ್ವೀಕೃತ ಅರ್ಜಿಗಳ ಬಗ್ಗೆ ಚರ್ಚಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ