Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದ್ರಧನುಷ್ ಲಸಿಕೆ ಅಭಿಯಾನ : ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಸುದ್ದಿಮೂಲ ವಾರ್ತೆ

ಮೈಸೂರು ಆ.2 : ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳಿಂದ ವಂಚಿತರಾದಂತಹ 5 ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರಿಗೆ ಬಿಟ್ಟುಹೋದ ಲಸಿಕೆಗಳನ್ನು ಪೂರ್ಣಗೊಳಿಸಲು ಸರ್ಕಾರ ಇಂದ್ರಧನುಷ್‌ ಅಭಿಯಾನ 5.0 ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ತೀವ್ರತರ ಮಿಷನ್ ಇಂದ್ರ ಧನುಷ್ 5.0 ಕಾರ್ಯಕ್ರಮ ವನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023 ರ ಅಂತ್ಯದೊಳಗೆ ದಡಾರ ಮತ್ತು ರುಬೆಲ್ಲಾ ರೋಗಗಳ ನಿರ್ಮೂಲನೆ ಗುರಿಯಿದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 3 ಸುತ್ತುಗಳಲ್ಲಿ ಅಭಿಯಾನ ನಡೆಯಲಿದೆ. ಅಭಿಯಾನವು ಆಗಸ್ಟ್(7ರಿಂದ 12ರವರೆಗೆ), ಸೆಪ್ಟೆಂಬರ್ (11ರಿಂದ 16ರವರೆಗೆ) ಮತ್ತು ಅಕ್ಟೋಬರ್ 9 ರಿಂದ 14ರವರೆಗೆನಡೆಯಲಿದ್ದು, ಪ್ರತಿ ತಿಂಗಳಲ್ಲಿ 6 ದಿನ ಲಸಿಕಾ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇಂದ್ರಧನುಷ್‌ 5.0 ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಹಳ್ಳಿಗಳು, ಕೊಳಚೆ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಸಂಬಂಧ ಆರೋಗ್ಯಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಲಸಿಕೆ ಪಡೆಯುವವರನ್ನು ಗುರುತಿಸುವ ಕೆಲಸ ಆಗಬೇಕು. ಲಸಿಕೆ ನೀಡುವಾಗ ಮಕ್ಕಳ ಆರೋಗ್ಯ ಪರಿಸ್ಥಿಯನ್ನು ಪರೀಕ್ಷಿಸಿ ನೀಡಬೇಕು. ಯಾವುದೇ ಅಡ್ಡ ಪರಿಣಾಮಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರ ಯಾವುದೇ ಹುದ್ದೆಗಳು ಖಾಲಿ ಇರಬಾರದು. ಆಶಾ ಕಾರ್ಯಕರ್ತೆಯರು ಲಸಿಕೆ ಪಡೆಯಲು ಅರ್ಹರಾದವರನ್ನು ಗುರುತಿಸಿ ಲಸಿಕೆ ಪಡೆಯುವಂತೆ ಅರಿವು ಮೂಡಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು

ಡೆಂಗ್ಯೂ ಬಗ್ಗೆ ಜಾಗೃತಿ ವಹಿಸಿ

ಮಳೆಗಾಲದಲ್ಲಿ ಡೆಂಗ್ಯೂ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಡೆಂಗ್ಯೂ ಸೊಳ್ಳೆಗಳ ಕಡಿತದಿಂದ ಕಂಡು ಬರುತ್ತದೆ. ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಹಳೆಯ ಟೈರ್ ಗಳು, ತೆಂಗಿನ ಚಿಪ್ಪು ಗಳು, ಒಡೆದ ಮಡಿಕೆಗಳು, ಮನೆಯ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ತೊಟ್ಟಿ ಹಾಗೂ ಟ್ಯಾಂಕ್ ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು. ಜ್ವರ ಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಅವರು ಮಾತನಾಡಿ ಆಗಸ್ಟ್ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 0- 5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ. ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಲಸಿಕೆ ಅಭಿಯಾನವನ್ನು ಪ್ರತಿ ತಿಂಗಳು 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಫಲಾನುಭವಿಗಳು https://uwinselfregistration.mohfw.giv.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ 0-2 ವರ್ಷದ 5075 ಮಕ್ಕಳು, 2-5 ವರ್ಷದ 432 ಮಕ್ಕಳು ಹಾಗೂ 1211 ಗರ್ಭಿಣಿ ಮಹಿಳೆಯರನ್ನು ಗುರುತಿಸಲಾಗಿದ್ದು, 900 ವಿಶೇಷ ಲಸಿಕಾ ಕೇಂದ್ರಗಳ ಮೂಲಕ ರಕ್ಷಣಾತ್ಮಕ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಓ ಕೆ.ಎಂ ಗಾಯತ್ರಿ,ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ