Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 24:ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಮತದಾರರಿಗೆ ಅಭಿನಂದನೆ ತಿಳಿಸಬೇಕು, ನಾವು ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗಬೇಕು. ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದೇವೆ.

ಅಧಿಕಾರ ಕೊಟ್ಟಿರುವ ಜನರಿಗೆ ನೀವು ಸರಿಯಾಗಿ ಸ್ಪಂದಿಸುವುದು ಹಾಗೂ ಉತ್ತಮ ಆಡಳಿತ ನೀಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ.

ಶಾಸಕರು ಜನರ ಮನಸ್ಸು ಗೆಲ್ಲಬೇಕು, ಲೋಕಸಭೆ ಚುನಾವಣೆ ಪ್ರಮುಖವಾಗಿದ್ದು, ದ್ವೇಷ ಅಸೂಯೆ ಎಲ್ಲವನ್ನೂ ಮರೆತು ಎಲ್ಲರೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

ಅಧಿಕಾರ ಬಂದಾಗ ಎಲ್ಲಾ ಅಧಿಕಾರಿಗಳು, ಗುತ್ತಿಗೆದಾರರು ನಿಮ್ಮನ್ನು ಸಂಪರ್ಕಿಸುತ್ತಾರೆ, ನೀವು ಯಾವುದರಲ್ಲೂ ಸಿಲುಕಿಕೊಳ್ಳಬೇಡಿ ಎಂಬ ಸಲಹೆ ನೀಡಿದ್ದೇವೆ. ಮತ್ತೆ ಶಾಸಕಾಂಗ ಸಭೆ ಕರೆದು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ತರಬೇತಿ ನೀಡಲಾಗುವುದು.

ಇಂದು ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವರನ್ನು ಆಕೆ ಮಾಡುತ್ತಿದ್ದು, ಎಲ್ಲಾ ಸದಸ್ಯರು ಹಾಜರಾಗುವಂತೆ ತಿಳಿಸಿದ್ದೇವೆ.

ಪೊಲೀಸ್ ಇಲಾಖೆಯನ್ನು ಕಾಂಗ್ರೆಸಿಕರಣ ಮಾಡಲು ಹೊರಟಿದ್ದಾರೆ ಎಂಬ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ ಅರಗ ಜ್ಞಾನೇಂದ್ರ ಅಥವಾ ಬೇರೆ ಯಾವುದೇ ನಾಯಕರಿಗೆ ನಾನು ಉತ್ತರ ನೀಡುವುದಿಲ್ಲ. ಅವರ ಆಡಳಿತ ನೋಡಿ ಜನ ಅವರಿಗೆ ಉತ್ತರ ನೀಡಿದ್ದಾರೆ’ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಕೇಸರಿಕರಣ ಎಂದರೆ ಯಾವ ರೀತಿ ಎಂಬ ಪ್ರಶ್ನೆಗೆ, ಮಾಜಿ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆ ಕೇಸರಿಕರಣ ಹಾಗೂ ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡಿದ್ದರು. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ. ಅದು ಕಾಂಗ್ರೆಸಿಗರಾಗಲಿ, ಬೇರೆ ಪಕ್ಷದವರಾಗಲಿ. ಕಾನೂನು ಪೊಲೀಸರಿಂದ ಮಾತ್ರ ರಕ್ಷಣೆ ಆಗಬೇಕು. ಅದನ್ನು ಎಲ್ಲರೂ ಪಾಲಿಸಬೇಕು. ರಾಜ್ಯದ ಮೂರ್ನಾಲ್ಕು ಕಡೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರ ಕಳಚಿ ರಾಜಕೀಯ ಸಂಘಟನೆಗಳ ರೀತಿಯಲ್ಲಿ ವಸ್ತ್ರ ಧರಿಸಿದ್ದರು. ಇದು ಸಂವಿಧಾನ ಪಾಲನೆ ಅಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಅದರದೇ ಆದ ಘನತೆ ಇದೆ. ಅದನ್ನು ಕಾಪಾಡಿಕೊಳ್ಳಬೇಕು. ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ರಾಜ್ಯದ ಅತ್ಯಂತ ದೊಡ್ಡ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದಾಗ ಅವರಿಗೆ ಸಮನ್ಸ್ ನೀಡಲಾಗಿತ್ತು? ಬೇರೆ ಯಾರಿಗೆ ಈ ರೀತಿ ಸಮನ್ಸ್ ನೀಡಿದ್ದರು? ಪೊಲೀಸರು ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಚಿವ ಸಂಪುಟ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಅವರಿಗೆ ಆ ಅಧಿಕಾರವಿದ್ದು, ಈ ವಿಚಾರವಾಗಿ ಅವರೇ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ