Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಲ್ಲೂರಿನಲ್ಲಿ ಡಿ.ಕೆ. ಶಿವಕುಮಾರ್ ರ ಮಾಧ್ಯಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಬೈಂದೂರು,ಏ.24: ಬೈಂದೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಜನರ ಉತ್ಸಾಹ ಮುಗಿಲು ಮುಟ್ಟಿತ್ತು. ಬಿಜೆಪಿಯಿಂದ ಸಾವಿರಾರು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಆನೇಕ ನಾಯಕರುಗಳು ಕಾಂಗ್ರೆಸ್ ಸೇರಿದ್ದಾರೆ. ಜನರ ಈ ವಿಶ್ವಾಸ ಉಳಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ಜನರ ಸೇವೆ ಮಾಡಬೇಕು. ರಾಹುಲ್ ಗಾಂಧಿ ಅವರು ಈ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ.

ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ.

ಈ ಭಾಗದಲ್ಲಿ ಬಿಜೆಪಿ ಹಿಂದುತ್ವದ ವಿಚಾರದಲ್ಲಿ ಚುನಾವಣೆ ಮಾಡುತ್ತಿದೆ ಇದು ಫಲ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಈ ಬಾರಿ ಆ ತಂತ್ರ ಫಲ ನೀಡುವುದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ. ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ' ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಸ್ಪರ್ಧಿಗಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುತ್ತಾರೆ. ಕೆಲವರಿಗೆ ಪಕ್ಷೇತರರಾಗಿ ಸ್ಪರ್ಧಿಸುವ ಚಟ ಇದ್ದು, ಮೊದಲಿನಿಂದಲೂ ಹಾಗೆ ಮಾಡಿದ್ದಾರೆ. ಅಂತಹವರನ್ನು ಹೋಗಬಹುದು, ಉಳಿದವರು ಅರ್ಜಿ ಹಿಂಪಡೆಯಲಿದ್ದಾರೆ. ನಿನ್ನೆ ಉಡುಪಿಯಲ್ಲಿ ಮಾತನಾಡಿದ್ದೇನೆ, ಅವರು ಹಾಗೂ ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್ ಅವರು ಅರ್ಜಿ ಹಿಂಪಡೆಯಲಿದ್ದಾರೆ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಲಿಂಗಾಯತ ಸಮುದಾಯ ಕುರಿತ ವಿವಾದದ ಬಗ್ಗೆ ಕೇಳಿದಾಗ, 'ಸಿದ್ದರಾಮಯ್ಯ ಅವರು ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆ ಹೊರತು, ಇಡೀ ಸಮುದಾಯ ಉದ್ದೇಶಿಸಿ ಹೇಳಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಕೆಂಪಣ್ಣ ಅವರು ಹೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ. ರಾಜ್ಯದಲ್ಲಿ 40% ಕಮಿಷನ್, ಪಿ ಎಸ್ ಐ ಸೇರಿದಂತೆ ನೇಮಕಾತಿ ಹಗರಣ, ವಿವಿ ಉಪಕುಲಪತಿ ನೇಮಕಕ್ಕೆ ಹಣ ಪಡೆದಿರುವುದು ನಮ್ಮ ಕಾಲದಲ್ಲಿ ಆಗಿದೆಯಾ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ಸಿದ್ದರಾಮಯ್ಯ ಸರ್ಕಾರದ ವಿಚಾರ ಮಾತನಾಡಿದ್ದು, ಸಮುದಾಯದ ವಿಚಾರ ಮಾತನಾಡಿಲ್ಲ' ಎಂದು ತಿಳಿಸಿದರು.

ಈ ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದೆಯೆ ಎಂಬ ಪ್ರಶ್ನೆಗೆ, 'ಬಿಜೆಪಿ ಆಣೆಕಟ್ಟು ಒಡೆದಿದೆ. ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ನೀಡಲಾಗುವುದು. ಹೊರಗಡೆ ಇರುವ ಎಲ್ಲ ಮತದಾರರು ತಮ್ಮ ಊರಿಗೆ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡುತ್ತೇನೆ' ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ