Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋವಿಡ್ ಸಮಯದಲ್ಲಿ ವೈದ್ಯರ ಸೇವೆ ಅವಿಸ್ಮರಣೀಯ: ಪ್ರತಿಭಾ ಶರತ್

 

ಕೋವಿಡ್ ಸಮಯದಲ್ಲಿ ವೈದ್ಯರ ಸೇವೆ ಅವಿಸ್ಮರಣೀಯ: ಪ್ರತಿಭಾ ಶರತ್

 

 

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜು.2: ನಿತ್ಯ ನೂರಾರು ಜನರ ಆರೋಗ್ಯ ರಕ್ಷಣೆಯಲ್ಲಿ ತೊಡಗುವ ವೈದ್ಯರು ಜೀವ ರಕ್ಷಕರು. ರೋಗಿಗಳ ಪಾಲಿಗೆ ದೇವರ ಸ್ಥಾನದಲ್ಲಿರುವ ವೈದ್ಯರನ್ನು ನಾವೆಲ್ಲ ಸದಾ ಗೌರವಿಸಬೇಕು. ಸಾರ್ವಜನಿಕ ಸೇವೆಯಲ್ಲಿರುವ ಅವರಿಗೆ ಸಹಕಾರ ಕೊಟ್ಟು ಮಾನಸಿಕ ಮತ್ತು ನೈತಿಕವಾಗಿ ಮತ್ತಷ್ಟು ಉತ್ತಮ ಸೇವೆ ಸಲ್ಲಿಸಲು ಪ್ರೋತ್ಸಾಹಿಸಬೇಕು ಎಂದು ಎಸ್‌ಬಿಜಿ ತಂಡದ ಮುಖ್ಯಸ್ಥೆ ಸಮಾಜ ಸೇವಕಿ ಪ್ರತಿಭಾ ಶರತ್ ಬಚ್ಚೇಗೌಡರು ಹೇಳಿದರು.

ಹೊಸಕೋಟೆ ನಗರದಲ್ಲಿರುವ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರನ್ನು ಸನ್ಮಾನಿಸಿ ಮಾತನಾಡಿದರು.

ಸರಕಾರಿ ಆಸ್ಪತ್ರೆಗಳಿಗೆ ಹಳ್ಳಿಗಾಡಿನ ಬಡ ಜನರು, ಆರ್ಥಿಕವಾಗಿ ಶಕ್ತಿಯಿಲ್ಲ ದವರು ಆಗಮಿಸುವುದರಿಂದ ಉತ್ತಮ ಆರೋಗ್ಯ ಸೇವೆ ಸರಕಾರಿ ಆಸ್ಪತ್ರೆಗಳಲ್ಲಿ ಅವರಿಗೆ ಸಿಗುವಂತಾಗಬೇಕು. ನಿಸ್ವಾರ್ಥವಾಗಿ ಬಡ ರೋಗಿಗಳ ಆರೈಕೆಯಲ್ಲಿ ತೊಡಗಿ ಜೀವ ರಕ್ಷಣೆ ಮಾಡುವ ಕಾರ್ಯವನ್ನು ದೇವರ ಸ್ಥಾನದಲ್ಲಿ ನಿಂತು ಸಮಸ್ಯೆಯನ್ನು ಆಲಿಸಿ ಗುಣಪಟ್ಟಿಸುವ ವೈದ್ಯರು ಮಾಡುತ್ತಿದ್ದಾರೆ. ತಾಳ್ಮೆ, ಸಹನೆ ದಿಕ್ಕಿನಲ್ಲಿ ಕೆಲಸ ಮಾಡುವ ವೈದ್ಯರ ಸೇವೆ ಮತ್ತು ಪ್ರೀತಿಯಿಂದ ರೋಗಿಗಳ ಸದಾ ಸ್ಮರಣೀಯವಾಗಿದೆ. ರೋಗಿಗಳು ಪ್ರತಿನಿತ್ಯ ವೈದ್ಯರಲ್ಲಿ ದೇವರನ್ನು ಕಾಣುತ್ತಾರೆ. ಅವರ ಸೇವೆಗೆ ಸಹಕಾರ ಕೊಡು ವುದು ನಮ್ಮಲ್ಲರ ಕರ್ತವ್ಯವಾಗಬೇಕು ಎಂದರು.

ಈ ವೇಳೆ ಆಸ್ಪತ್ರೆಯ ಹಿರಿಯ ಮೂಳೆ ತಜ್ಞ ಡಾ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಆಸ್ಪತ್ರೆಯ ಎಲ್ಲ ವೈದ್ಯರು, ಸಿಬ್ಬಂದಿಯನ್ನು ಗೌರವಿಸಲಾಯಿತು. ಆಡಳಿತಾಧಿಕಾರಿ ಡಾ .ಸತೀಶ್ ಸೇರಿದಂತೆ ಎಸ್‌ಬಿಜಿ ತಂಡದ ಪದಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

 

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ