Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ದಾನಿಗಳ ನೆರವು ಅತ್ಯಗತ್ಯ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಅ. 4 : ಸರ್ಕಾರಿ ಶಾಲೆಗಳಲ್ಲಿ ಸಹ ಗುಣಮಟ್ಟದ ಶಿಕ್ಷಣವನ್ನು ಕೊಡುತ್ತಿದ್ದು ಸರ್ಕಾರದ ಜೊತೆ ಜೊತೆಗೆ ದಾನಿಗಳ ನೆರವಿನ ಹಸ್ತ ಕೂಡ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಕಣ್ಣೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್ ಬುಕ್, ಸಮವಸ್ತ್ರ ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನ ವಿತರಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಆಂಗ್ಲಭಾಷೆಯ ವ್ಯಾಮೋಹ ಹೆಚ್ಚಾಗಿದೆ. ಇದರ ಪರಿಣಾಮ ಖಾಸಗಿ ಶಾಲೆಗಳಿಗೆ ದಾಖಲಾತಿ ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಂಠಿತವಾಗುತ್ತಿದೆ. ಆದ್ದರಿಂದ ಗ್ರಾಮೀಣ ಭಾಗದ ಪೋಷಕರು ತಮ್ಮ ಮಕ್ಕಳನ್ನು ಗ್ರಾಮದ ಶಾಲೆಗಳಿಗೆ ದಾಖಲು ಮಾಡಿ ಸರ್ಕಾರಿ ಶಾಲೆಗಳ ಉಳಿವಿಗೆ ಸಹಕರಿಸಬೇಕು ಎಂದರು.

ಮಾದರಿ ವಸತಿ ಶಾಲೆಗಳ ನಿರ್ಮಾಣ ಗ್ರಾಮಾಂತರ ಪ್ರದೇಶದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕೇವಲ ಹತ್ತರಿಂದ ಇಪ್ಪತ್ತು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆಗಳು ಹೆಚ್ಚಾಗಿದ್ದು ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಿ ಗುಣಮಟ್ಟದ ಶಿಕ್ಷಣವನ್ನು ಉಚಿತ ಊಟ ವಸತಿ ಜೊತೆಗೆ ನೀಡಲು ಸರ್ಕಾರ ನಿರ್ಧಾರ ಮಾಡಿದ್ದು ಮುಂದಿನ ದಿನಗಳಲ್ಲಿ ಹೋಬಳಿಗೊಂದು ಮಾದರಿ ವಸತಿ ಶಾಲೆ ನಿರ್ಮಾಣ ಆಗಲಿದೆ ಎಂದು ಶಾಸಕ ಶರತ್

ಬಚ್ಚೇಗೌಡ ಇದೇ ಸಂದರ್ಭದಲ್ಲಿ ತಿಳಿಸಿದರು.

ಗ್ರಾ.ಪಂ ಸದಸ್ಯ ಮುನಿಯಪ್ಪ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿನ ಬಡ ಕುಟುಂಬದ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅಂತಹ ಮಕ್ಕಳಿಗೆ ನಾನು ಪ್ರತಿ ವರ್ಷ ನನ್ನ ದುಡಿಮೆಯ ಅಲ್ಪಭಾಗವನ್ನು ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸುತ್ತಿದ್ದೇನೆ. ಸಮಾಜದಲ್ಲಿ ಉಳ್ಳವರು ಸಹ ಕೈ ಜೋಡಿಸಬೇಕು ಎಂದರು.

ಕೆಪಿಸಿಸಿ ಸದಸ್ಯ ನಾಣಿ, ತಾಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ, ಮಾಜಿ ಗ್ರಾಪಂ ಸದಸ್ಯ ರಾಮಕೃಷ್ಣಪ್ಪ, ನಗರಸಭೆ ಸದಸ್ಯ ಕೇಶವಮೂರ್ತಿ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುನಿಲ್, ಮುಖಂಡರಾದ ಚೀಮಂಡಹಳ್ಳಿ

ಮುನಿಶಾಮಣ್ಣ, ಮುಖ್ಯ ಶಿಕ್ಷಕಿ ರೇಣುಕಮ್ಮಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ