Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೇಖನಿಯೆಂಬ ಅಸ್ತ್ರ ಸದುಪಯೋಗವಾಗಬೇಕು : ಡಾ. ಆಂಜಿನಪ್ಪ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಆ.4 : ಮಾಧ್ಯಮ ಲೋಕದಲ್ಲಿ ಲೇಖನಿ ಎಂಬ ಅಸ್ತ್ರ ಹೆಚ್ಚು ಹರಿತವಾಗಿದ್ದು, ಅದರ ಸದುಪಯೋಗವಾಗಬೇಕು ಎಂದು ವೈದ್ಯ ಡಾ. ಆಂಜಿನಪ್ಪ ತಿಳಿಸಿದರು.

ಹೊಸಕೋಟೆ ನಗರದ ಪರಿವೀಕ್ಷಣಾ ಮಂದಿರದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ

ಸಂಪಾದಕರು ಮತ್ತು ವರದಿಗಾರರ ಸಂಘ, ತಾಲೂಕು ಪತ್ರಕರ್ತರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ವರದಿಗಾರರು ಸತ್ಯಾಸತ್ಯತೆಯಿಂದ ವರದಿ ಮಾಡಬೇಕು. ಸಮಾಜದಲ್ಲಿ ಪತ್ರಿಕೋದ್ಯಮ ನಾಲ್ಕನೇ ಅಂಗವಾಗಿದ್ದು, ನಿಮ್ಮ ಸೇವೆ ಅಮೋಘವಾದುದ್ದು, ನಾನು ನನ್ನ ವೃತ್ತಿಯಲ್ಲಿ 35 ಸಾವಿರ ಅಪರೇಷನ್ ಮಾಡಿ ವಿಶ್ವದಾಖಲೆ ನಿರ್ಮಿಸಿದ್ದು, ಒಂದೇ ರಾತ್ರಿ 10 ಜನರ ಹೊಟ್ಟೆಯಲ್ಲಿದ್ದ ಗುಂಡುಗಳನ್ನು ತೆಗದಿದ್ದು, ಅದೂ ಕೂಡ ಸಾಧನೆಗೆ ಗರಿ ಮೂಡಿಸಿದೆ. ಮಾಧ್ಯಮ ವರದಿಗಾರರು ಸಮಾಜ ಸುಧಾರಣೆ ಜೊತೆಗೆ ಸಮಾಜ ಸೇವೆಯ ರೀತಿಯಲ್ಲಿ ಕೆಲಸ ಮಾಡುತಿದ್ದು, ನೈಜ ಪತ್ರಕರ್ತರ ನೆರವಿಗೆ ಸರ್ಕಾರ ಇನ್ನೂ ಹೆಚ್ಚಿನ ಭದ್ರತೆ ನೀಡಬೇಕಿದೆ . ವರದಿಗಾರರಿಗೆ ವೈದ್ಯಕೀಯವಾಗಿ ಸಹಾಯ ಬೇಕಿದ್ದರೆ ನೀಡಲು ಸದಾ ಸಿದ್ದನಿದ್ದೇನೆ ಎಂದು ವಿಶ್ವಾನ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, ಪತ್ರಕರ್ತರು ವೃತ್ತಿ ಧರ್ಮದಲ್ಲಿ ಪೆನ್ನು ಕತ್ತಿಗಿಂತ ಹರಿತವಾದುದ್ದು. ಆದ್ದರಿಂದ ಕಣ್ಣಾರೆ ಕಂಡು ಕಾಣದಂತೆ ಹೋಗಬಾರದು. ಅದನ್ನು ಪ್ರಶ್ನಿಸಿ ಅದನ್ನು ವಸ್ತು ನಿಷ್ಠೆಯಿಂದ ಬರೆದರೆ ಅದಕ್ಕೂಂದು ಅರ್ಥ ಬರುತ್ತದೆ ಎಂದರು.

ಕರ್ನಾಟಕ ಸಂಪಾದಕ ಹಾಗೂ ವರದಿಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಟಿ. ನಾಗರಾಜ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾಧ್ಯಮ ವಲಯದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ನೈಜ ಪತ್ರಕರ್ತರ ಘನತೆಗೆ ಕುಂದುಂಟಗುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲೂಕಿನ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಸಂಪಾದಕರು ಹಾಗೂ ವರದಿಗಾರರ ರಾಜ್ಯ ಉಪಾಧ್ಯಕ್ಷ ಟಿ. ನಾಗರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ. ರಾಮೇಗೌಡ, ಪ್ರಧಾನಕಾರ್ಯದರ್ಶಿ ನಟರಾಜ್, ತಾಲೂಕು ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ತೇಜಸ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ