Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ರತ್ನ ಪ್ರಶಸ್ತಿಗೆ ಡಾ. ಬಿ.ಎಂ.ಉಮೇಶ್ ಕುಮಾರ್ ಭಾಜನ

 

ಬೆಂಗಳೂರು,ನ.21:ಯುವ ಸಹಕಾರಿ ಧುರೀಣ ಡಾ. ಬಿ. ಎಂ. ಉಮೇಶ್ ಕುಮಾರ್ ಅವರಿಗೆ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪದಲ್ಲಿ ಪ್ರತಿಷ್ಠಿತ "ಸಹಕಾರ ರತ್ನ" ಪ್ರಶಸ್ತಿ ಯನ್ನು ಪ್ರದಾನ ಮಾಡಲಾಯಿತು.

ಮಂಗಳವಾರ ವಿಜಯಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಹಾಗೂ ಮಹಾಮಂಡಲದ ಅಧ್ಯಕ್ಷ ಜಿ. ಟಿ. ದೇವೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿ ಸಹಕಾರ ರಂಗದಲ್ಲಿನ ನಿಮ್ಮ ಸಾಧನೆ ಮತ್ತಷ್ಟು ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು.

ಸಚಿವರಾದ ಎಂ. ಬಿ. ಪಾಟೀಲ್, ಶಿವಾನಂದ್ ಪಾಟೀಲ್, ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಹಲವು ಶಾಸಕರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರುಗಳು ಸೇರಿ ರಾಜ್ಯದ ಹಿರಿಯ ಸಹಕಾರಿ ಧುರೀಣ ರು ಕಾರ್ಯ ಕ್ರಮ ದಲ್ಲಿ ಪಾಲ್ಗೊಂಡು ಶುಭ ಹಾರೈಸಿ ದರು.

ಉದ್ಯಮ, ಸಹಕಾರಿ ಯಲ್ಲಿ ಸಾಧನೆ

ವೃತ್ತಿಯಿಂದ ಉದ್ಯಮಿಯಾದ ಉಮೇಶ್ ಕುಮಾರ್ ಅವರು ಸಹಕಾರ, ಸಾಮಾಜಿಕ ಸೇವೆ, ಧಾರ್ಮಿಕ, ಸಮುದಾಯ ಸಂಘಟನೆ ಮುಂತಾದ ವೈವಿಧ್ಯಮಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಎನ್ನುವ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸಿ, ಅದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಾ, ಸಹಕಾರ ರಂಗದಲ್ಲಿ ಮಹತ್ವದ ಛಾಪು ಮೂಡಿಸಿದ್ದಾರೆ.

ಸಹಕಾರಿ ಕ್ಷೇತ್ರದತ್ತ ಯುವ ಸಮೂಹವನ್ನು ಸೆಳೆಯುವುದಕ್ಕೆ ಈ ಬಾರಿಯ ಸಹಕಾರಿ ಸಪ್ತಾಹದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಹಕಾರಿ ಸಾಧಕ ಉಮೇಶ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿರುವುದು ಅತ್ಯಂತ ಅರ್ಥಪೂರ್ಣವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ