Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಛಾಯಾಚಿತ್ರಗಳ ಮೂಲಕ ಇತಿಹಾಸಕಟ್ಟುವ ಕೆಲಸ : ಡಾ.ತುಕರಾಮ ಪೂಜಾರಿ 

ಸುದ್ದಿಮೂಲ ವಾರ್ತೆ

ಮಂಗಳೂರು,ನ.29:ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ ,ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಆಶ್ರಯದಲ್ಲಿ ನಡೆದ 'ಛಾಯಾ ಲೋಕ' ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು .

ಈ‌ ನಿಟ್ಟಿನಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಹಾಗೂ ಜಿನೇಶ್ ಪ್ರಸಾದ್ ಅವರ ಸಾಧನೆ ಅನನ್ಯವಾದುದು ಎಂದು ಡಾ.ತುಕರಾಮ ಪೂಜಾರಿ ಅಭಿಪ್ರಾಯಪಟ್ಟರು. ವಿಶ್ವನಾಥರ ಕೋಟೆಗಳ ದಾಖಲೀಕರಣ ಕೃತಿ ಅಪೂರ್ಣ ದಾಖಲೆಯಾಗಿದೆ ಎಂದವರು ಶ್ಲಾಘಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಪ್ರಾಂಶುಪಾಲ ಪ್ರೊ. ಉದಯ ಕುಮಾರ್ ಇರ್ವತ್ತೂರು ಅವರು ಮಾತನಾಡಿ , ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಅವರ ಕರ್ನಾಟಕದ ಕೋಟೆಗಳು ಹಾಗೂ ಪಕ್ಷಿಗಳ ಸಮಗ್ರ ಛಾಯಾ ಚಿತ್ರ ಕೃತಿ ಒಬ್ಬ ಶೃಜನಶೀಲ ಹಾಗೂ ಸೂಕ್ಷ್ಮ ಪ್ರಜ್ಞೆಯ ಪ್ರತೀಕವಾಗಿದೆ , ಇದೊಂದು ಅತ್ಯುತ್ತಮ ದಾಖಲೀಕರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಹಾಗೂ ಜಿನೇಶ್ ಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಯುವ ವಕೀಲ ನವನೀತ್ ಬಿ.ಹಿಂಗ್ಹಾಣಿ ಪೊಟೋಗ್ರಾಪಿ ಮತ್ತು ಕಾಪಿರೈಟ್ ಕಾಯಿದೆ ಬಗ್ಗೆ ಮಾತನಾಡಿದರು . ಉಪನ್ಯಾಸಕಿ ಹಾಗೂ ಪಕ್ಷಿ ವೀಕ್ಷಕಿ ವೈಭವಿ ಜಿ. ಅವರು ಕರ್ನಾಟಕದ ಪಕ್ಷಿಗಳ ಕೃತಿ ಬಗ್ಗೆ ಮಾತನಾಡಿದರು .

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಹಾಗೂ ರೋಶನಿ ನಿಲಯದ ಕುಲಸಚಿವೆ ಪ್ರೋ.ವಿನುತಾ ರೈ ಅವರು ಶುಭಕೋರಿ ಮಾತನಾಡಿದರು. ವಿವಿಧ ಕಾಲೇಜಿನ ಇತಿಹಾಸ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಹಾಗೂ ಜಿನೇಶ್ ಪ್ರಸಾದ್ ಅವರೊಂದಿಗೆ ಸಂವಾದ ನಡೆಸಿದರು .

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ನಿರ್ವಹಿಸಿದರು . ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಹಾಗೂ ಕೋಶಾಧಿಕಾರಿ ಗಿರಿಧರ್ ಶೆಟ್ಟಿ ಸ್ವಾಗತಿಸಿದರು , ಸುಳ್ಯ ತಾಲೂಕು ಅಧ್ಯಕ್ಷ ಈಶ್ವರ್ ವಾರಾಣಾಸಿ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ