Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಸಂಭ್ರಮದ ಈದ್ ಮಿಲಾದ್

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಸೆ.28: ಜಗತ್ತಿನಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಅವತರಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯನ್ನು ರೇಷ್ಮೆಯ ನಗರ ಶಿಡ್ಲಘಟ್ಟದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಇಡೀ ಜಗತ್ತಿನಲ್ಲಿ ಶಾಂತಿ ಸೌಹಾರ್ದತೆಯನ್ನು ನೆಲೆಸಲು ಅವತರಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು ಜೊತೆಗೆ ಕೆಲವಡೆ ಮೆಕ್ಕಾ ಮದೀನಾ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ ಅದರ ಮೂಲಕ ಸಂಭ್ರಮವನ್ನು ವ್ಯಕ್ತಪಡಿಸಿದರು.

ಈದ್ ಮಿಲಾದ್ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪೀರ್ ಝಾದಾ ಸೈಯದ್ ಮಝಹರ್ ಉಲ್ ಹಖ್ ಫಿದಾಉಲ್ ಲತೀಫಿ ಶಾ ಆಮೀರಿ ಅವರು ಹಣ್ಣು ಹಂಪಲಗಳನ್ನು ವಿತರಿಸಿ ಸಮಾಜದಲ್ಲಿರುವ ಪ್ರತಿಯೊಬ್ಬರು ಪ್ರವಾದಿ ಮೊಹ್ಮದ್ ಪೈಗಂಬರ್ ಅವರ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಶಾಂತಿ, ಸೌಹಾರ್ದತೆಯನ್ನು ಸಾರಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕೆಂದು ಕರೆ ನೀಡಿದರು.

ನಗರದ ಕೋಟೆ ವೃತ್ತದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಆರಾಧಕರು ಬೆಳಗಿನ ತಿಂಡಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡುವ ಜೊತೆಗೆ ನಗರದ ಈದ್ಗಾ ಮೈದಾನದ ಬಳಿ ಸಿಹಿ ಪಾಯಸವನ್ನು ವಿತರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು.

ಸಂಪ್ರದಾಯದಂತೆ ನಗರದ ಮಿಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು ಜಾಮೀಯಾ ಮಸೀದಿಯ ಧರ್ಮಗುರು ಹಝರತ್ ಗುಲಾಂ ಜೀಲಾನಿ ಮಿಸ್ಬಾಹೀ ಅವರು ಪ್ರವಾದಿ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಮುನ್ನ ನಗರದ ಪ್ರಮುಖ ಬೀದಿಗಳನ್ನು ಹಸಿರು ಬಣ್ಣದ ಧ್ವಜಗಳನ್ನು ಅಲಂಕರಿಸಲಾಗಿತ್ತು ಯುವಕರು ತಮ್ಮ ತಮ್ಮ ದ್ವಿಚಕ್ರ ವಾಹನಗಳನ್ನು ಹಸಿರು ಬಣ್ಣದ ಬಾವುಟಗಳಿಂದ ಶೃಂಗರಿಸಿದರು ನಗರದ ಟಿ.ಬಿ.ರಸ್ತೆಯಲ್ಲಿ ಮುಸ್ಲಿಂ ಯುವಕರು ಪ್ರತಿಯಿಬ್ಬರಿಗೆ ಸಿಹಿ ಹಂಚಿಕೆ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ