Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ: ಈಶ್ವರ ಖಂಡ್ರೆ

ಬೆಂಗಳೂರು, ನ.6: ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ