Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶ್ವರ ಖಂಡ್ರೆ ಕ್ರಿಯಾಶೀಲ ಮಂತ್ರಿ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಮೈಸೂರು,ಅ.8: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕ್ರಿಯಾಶೀಲ ಸಚಿವರಾಗಿದ್ದು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಮೈಸೂರಿನ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ಇಂದು ನಡೆದ 69ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಸಚಿವರು ಇಲಾಖೆಯನ್ನು ಸರಿದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ಬಹಿರಂಗವಾಗಿ ಮುಕ್ತ ಕಂಠದಿಂದ ಪ್ರಶಂಸಿಸಿದರು.

ಅರಣ್ಯ ಇಲಾಖೆಯಲ್ಲಿರುವವರಿಗೆ ಅರಣ್ಯ ಬೆಳೆಸಬೇಕು ಎಂಬ ಕಾಳಜಿ ಇದ್ದರೆ, ಅಧಿಕಾರಿಗಳು ಎಲ್ಲ ಕೆಳ ಹಂತದ ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಖಂಡಿತಾ ಅರಣ್ಯ ಪ್ರದೇಶ ಹೆಚ್ಚಿಸಬಹುದು ಎಂದರು.

ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು ಇದನ್ನು ನಿಗ್ರಹಿಸಲು ಅರಣ್ಯದೊಳಗೆ ವನ್ಯಜೀವಿಗಳಿಗೆ ಅದರಲ್ಲೂ ಆನೆಗಳಿಗೆ ಸೂಕ್ತ ಆಹಾರ ಮತ್ತು ನೀರು ದೊರಕುವಂತೆ ಕ್ರಮ ಕೈಗೊಳ್ಳಲು ಸಲಹೆ ನೀಡಿದ ಅವರು ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಎಂಬ ಭರವಸೆ ನೀಡಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಸರಿಯಾದ ಕ್ರಮ:

ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಮೈಸೂರನ್ನು ಘೋಷಿಸಿರುವುದು ಸರಿಯಾದ ಕ್ರಮ. ಅದನ್ನು ಮಾಡಲೇಬೇಕು. ಪ್ಲಾಸ್ಟಿಕ್ ನಿಂದ ಪರಿಸರ ಹಾಳಾಗುತ್ತಿದೆ. ಇದರಿಂದ ಮಾನವರು ಮತ್ತು ಪಶು, ಪಕ್ಷಿಗಳ ಆರೋಗ್ಯದ ಮೇಲೆ ಪರಿಣಾಮವಾಗುತ್ತಿದೆ. ಹೀಗಾಗಿ ಏಕ ಬಳಕೆ ಪ್ಲಾಸ್ಟಿಕ್ ತ್ಯಜಿಸಿ ಪರ್ಯಾಯ ವಸ್ತು ಬಳಸಬೇಕು ಎಂದರು.

ಮೈಸೂರು ಪ್ರವಾಸೋದ್ಯಮ ಕ್ಷೇತ್ರ. ಹೀಗಾಗಿ ಮೈಸೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡುವುದು ಅತ್ಯಂತ ಅವಶ್ಯ. ಹೀಗಾಗಿ ಮೈಸೂರು ಮತ್ತು ಸುತ್ತಮುತ್ತಲಿನ ಜನರು ಈ ನಿಟ್ಟಿನಲ್ಲಿ ಸಹಕಾರ ಮಾಡಬೇಕು ಎಂದು ಕರೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ