Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮುದಾಯದ ಪ್ರತಿಯೊಬ್ಬರು ಕುಲಕಸುಬನ್ನು ಮರೆಯಬಾರದು : ಜಿ.ಚಂದ್ರಣ್ಣ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 31 : ಸಮಾಜದಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದು, ನಮ್ಮ ಕುಲಕಸುಬು ಶ್ರಮದಿಂದಲೇ ಮುಂದೆ ಬರಲು ಸಾಧ್ಯ, ಸಮುದಾಯದ ಪ್ರತಿಯೊಬ್ಬರೂ ವೃತ್ತಿಪರರರಾಗಿ ಪರಿಣಿತಿ ಹೊಂದಬೇಕು. ಇದರಿಂದ ಮಾತ್ರ ಸಣ್ಣ ಸಮುದಾಯವು ಎಲ್ಲಾ ಕ್ಷೇತ್ರದಲ್ಲೂ ಏಳಿಗೆ ಹೊಂದುವುದು ಎಂದು ಮಾಜಿ ಶಾಸಕರು ಹಾಗೂ ಕೊರಮ ಸಮುದಾಯದ ಗೌರವಾಧ್ಯಕ್ಷ ಜಿ .ಚಂದ್ರಣ್ಣ ಹೇಳಿದರು.

ದೇವನಹಳ್ಳಿ ಟೌನ್ ನ ತಾಲೂಕು ಆಡಳಿತ, ಕೊರಮಸಮುದಾಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಣೆಯನ್ನು ತಾಲೂಕು ಆಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.

ದೇವನಹಳ್ಳಿ ತಾಲೂಕು ತಹಸೀಲ್ದಾರ್ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಶಿವರಾಜ್ ಅವರು ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ಎ.ಕೆ.ಪಿನಾಗೇಶ್‌ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿಮಂತ್ರಿಯಾಗಿದ್ದ ಶರಣ ನೂಲಿಯ ಚನ್ನಯ್ಯ ಅವರು, ಎಲ್ಲಾ ಸಮುದಾಯಕ್ಕೆ ಸ್ಫೂರ್ತಿದಾಯಕರಾಗಿದ್ದಾರೆ. ದೇವನಹಳ್ಳಿ ತಾಲೂಕಿನಾದ್ಯಂತ ಸುಮಾರು 8-10 ಸಾವಿರ ಸಮಾಜದವರಿದ್ದು, ರಾಜ್ಯದಲ್ಲಿ ಸುಮಾರು I5- 20ಲಕ್ಷ ಜನಸಂಖ್ಯೆ ಹಾಗೂ ದೇಶದಾದ್ಯಂತ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಸಮಾಜವಾಗಿದೆ. ರಾಜ್ಯದಲ್ಲಿ ಕೊರಮ ಸಮಾಜವು ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಮುಂಬರುವಂತೆ ಎಲ್ಲಾ ರೀತಿಯಲ್ಲಿ ಸಂಘಟಿತರಾಗಬೇಕು ಎಂದರು.

ಈ ವೇಳೆ ತಹಶಿಲ್ದಾರ್ ಶಿವರಾಜ್ ರವರನ್ನು ಸಮಾಜದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಜಿ.ಚನ್ನಕೇಶವ, ಅಧ್ಯಕ್ಷ ಕೆ.ನಾಗೇಶ್‌, ಪ್ರಧಾನ ಕಾರ್ಯದರ್ಶಿ ಆರ್.ಭರತ್‌ ಕುಮಾರ್, ಖಜಾಂಚಿ ಆರ್.ಶಂಕರ್, ಕಾರ್ಯದರ್ಶಿ ವಕೀಲ ಶ್ರೀನಿವಾಸ್, ಸಂ.ರಾ. ನವೀನ್‌ ಕುಮಾರ್, ಜಿ.ಗಣೇಶ್ ಬಾಬು, ನಿರ್ದೇಶಕರಾದ ಪ್ರಭಾಕರ್, ಅನಂತ್, ಶಂಕರ್, ಮಲ್ಲಿಕಾರ್ಜುನ್, ಲೋಕೇಶ್‌, ಚಂದ್ರಪ್ಪ, ಶಿವಕುಮಾರ್, ಶ್ರೀಧರ್, ಉದಯರವಿ, ಸಂದೀಪ್ ಸೇರಿದಂತೆ ತಾ.ಆಡಳಿತ ಸಿಬ್ಬಂದಿಗಳು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ