Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲರೂ ಸೇರಿಕೊಂಡು ಸೌಹಾರ್ದ ಭಾರತ ಕಟ್ಟಲೇಬೇಕು - ವೀರಹನುಮಾನ

ಸುದ್ದಿಮೂಲ ವಾರ್ತೆ ರಾಯಚೂರು, ಜ.11:
ಮಹಿಳೆಯರು ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಎಲ್ಲರೂ ಕೂಡಿ ಸೌಹಾರ್ದ ಭಾರತ ಕಟ್ಟಲೇಬೇಕಾಗಿದೆ ಎಂದು ಹಿರಿಯ ಸಾಹಿತಿ ವೀರ ಹನುಮಾನ ಹೇಳಿದರು.
ಶನಿವಾರ ಸಂಜೆ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮ್ಯಾಾದಾರ ಲಲಿತಕಲಾ ಪ್ರತಿಷ್ಠಾಾನ ಸಂಯುಕ್ತಾಾಶ್ರಯದಲ್ಲಿ ಹಮ್ಮಿಿಕೊಂಡ ನಾಡಿನ ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರ ಸೌಹಾರ್ದ ಭಾರತ, ಸಮಾನತೆಯ ಸ್ನೇಹಿತ ಪುಸ್ತಕ ಜನಾರ್ಪಣೆ ಸಮಾರಂಭ ಉದ್ಘಾಾಟಿಸಿ ಮಾತನಾಡಿದರು. ಭಾರತದಲ್ಲಿನ ಸಾಮಾಜಿಕ ನ್ಯಾಾಯದ ಅನೇಕ ಮುಖಗಳನ್ನು ಕಾಣಬಹುದು.ಹತ್ತು ಲೇಖನಗಳಲ್ಲಿ ಭಾರತ ಪಾರಂಪರಿಕ ಸೌಹಾರ್ದತೆ ಜೊತೆಗೆ ದೇಶದ ಬಿಕ್ಕಟ್ಟುಗಳಿಗೆ ಪರಿಹಾರ ಕಾಣಬಹುದಾಗಿದೆ ಎಂದು ಹೇಳಿದರು.
ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿ. ಬಿ. ಚಿಲ್ಕರಾಗಿ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿ, ಮಾರುಕಟ್ಟೆೆ ಮಾತುಗಳಿಗಿಂತ ಮೌಲ್ಯ ಮಾತುಗಳು ಉತ್ತಮ ಎಂದು ಹೇಳಿದರು.
ಹಿರಿಯ ಸಾಹಿತಿ ಮಹಾಂತೇಶ ಮಸ್ಕಿಿ ಕೃತಿ ಪರಿಚಯಿಸಿ ಈ ರಾಷ್ಟ್ರವನ್ನು ಒಂದೇ ಧರ್ಮಕ್ಕೆೆ ಸೀಮಿತಗೊಳಿಸಬಾರದು ಅನ್ನುವ ಉದ್ದೇಶದಿಂದ ಈ ಪುಸ್ತಕದಲ್ಲಿರುವ ತಿರುಳಾಗಿದೆ. ಜಗತ್ತು ಬಹಳ ಸುಂದರವಾಗಿದೆ ಅದಕ್ಕೆೆ ಅಂಟಿರುವ ರೋಗ ಮನುಷ್ಯ, ಪ್ರಸ್ತುತ ಸಮಾಜಕ್ಕೆೆ ಈ ಕೃತಿ ಔಷಧಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತುರ್ವಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಾಂಶುಪಾಲ ಡಾ.ಕೆ.ಖಾದರ ಬಾಷಾ, ಹಿರಿಯ ಸಾಹಿತಿ ಬಾಬು ಬಂಡಾರಿಗಲ್, ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಮಾತನಾಡಿದರು.
ವೇದಿಕೆಯಲ್ಲಿ ಪರಿಷತ್ತಿಿನ ನಿಕಟ ಪೂರ್ವ ಜಿಲ್ಲಾಾಧ್ಯಕ್ಷ ಡಾ. ಬಸವ ಪ್ರಭು ಪಾಟೀಲ್ ಬೆಟ್ಟದೂರು, ಮ್ಯಾಾದಾರ ಲಲಿತಕಲಾ ಪ್ರತಿಷ್ಠಾಾನದ ಅಧ್ಯಕ್ಷ ಎಚ್.ಎಚ್.ಮ್ಯಾಾದಾರ, ಪರಿಷತ್ ತಾಲೂಕಾಧ್ಯಕ್ಷ ಡಾ.ಬಿ.ವಿಜಯ ರಾಜೇಂದ್ರ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ