Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿಐ ತರಬೇತುದಾರರಿಗೆ ಬೀಳ್ಕೊಡುಗೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜೂ 29 : ಪ್ರತಿಯೊಬ್ಬ ತರಬೇತಿದಾರರು ತಾವು ಮಾಡುವ ಕೆಲಸದ ಬಗ್ಗೆ ಕೀಳರಿಮೆಯನ್ನು ಬಿಟ್ಟು ಆತ್ಮಗೌರವವನ್ನು ಇಟ್ಟುಕೊಂಡು ಕೆಲಸ ಮಾಡಿ, ಬದುಕು ಉನ್ನತಿಯ ಹಾದಿಗೆ ತಲುಪುತ್ತದೆ ಎಂದು ನಿವೃತ್ತ ಯೋಧ ಶ್ರೀನಿವಾಸ್ ತಿಳಿಸಿದರು.

ನಗರದ ಎಂವಿಎಂ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಐಟಿಐ ತರಬೇತಿದಾರರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಐಟಿಐ ಎನ್ನುವುದು ಒಂದು ಕೌಶಾಲ್ಯಾಧಾರಿತ ಶಿಕ್ಷಣವಾಗಿದೆ. ಪ್ರಸ್ತುತ ವೇಗದ ಜಗತ್ತಿನಲ್ಲಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಇರುವ ಮಹತ್ವ ಅಷ್ಟಿಷ್ಟಲ್ಲ. ಕೇವಲ ವೈದ್ಯರು, ಇಂಜಿನಿಯರ್ ವೃತ್ತಿ ಸೇರಿದಂತೆ ಇತರೆ ಉದ್ಯೋಗಗಳನ್ನು ಪಡೆಯುವ ದೃಷ್ಠಿಯಿಂದ ಶಿಕ್ಷಣದತ್ತ ದಾಪುಗಾಲಿಡುವ ವಿದ್ಯಾರ್ಥಿಗಳ ನಡುವೆ ಐಟಿಐ ತರಬೇತಿಗೆ ಬರುವ ವಿದ್ಯಾರ್ಥಿಗಳು ದೇಶದ ಅಭಿವೃದ್ದಿಗೆ ವಿಶೇಷ ಕೊಡುಗೆಯನ್ನು ನೀಡಲಿದ್ದಾರೆ ಎಂದು ಬಣ್ಣಿಸಿದರು.

ಐಟಿಐ ಸಂಸ್ಥೆಯ ಪ್ರಾಂಶುಪಾಲ ನಾಗರಾಜ್ ಮಾತನಾಡಿ, ಮನುಷ್ಯನಿಗೆ ಹಣ ಮತ್ತು ವಿದ್ಯೆ ಎಂಬುದು ಜೀವನದಲ್ಲಿ ಅತ್ಯಮೂಲ್ಯ ಸಂಪತ್ತಾಗಿದೆ. ನಾವು ಸಂಪಾದನೆ ಮಾಡಿದ ಹಣವನ್ನು ಯಾರಾದರೂ ಅಪಹರಿಸಬಹದು. ಬದಲಾಗಿ ಯಾರೊಬ್ಬರೂ ಕದಿಯಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಪ್ರಸ್ತುತ ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸಾಕಷ್ಟು ಬೇಡಿಕೆ ಇದೆ. ದೊಡ್ಡ ದೊಡ್ಡ ಕೈಗಾರಿಕೆಗಳು ಕೌಶ್ಯಲ್ಯ ಆಧಾರಿತ ಶಿಕ್ಷಣ ಪಡೆದವರಿಗೆ ಉದ್ಯೋಗ ಕ್ಷೇತ್ರದಲ್ಲಿ ಆದ್ಯತೆ ನೀಡುತ್ತಿದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಕೌಶಲ್ಯ ಆಧಾರಿತ ಶಿಕ್ಷಣ ಕಲಿಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಸಾಪ ಜಿಲ್ಲಾ ಕಾರ್ಯದರ್ಶಿ ನಟರಾಜ್ ಎಂಎನ್‌ಆರ್, ಹೆಡ್ ಹೆಲ್ಡ್ ಐ ಫೌಂಡೇಷನ್ ವ್ಯವಸ್ಥಾಪಕ ಶ್ರೀಧರ್ ಪಟವಾರಿ, ರಾಜಶೇಖರ್, ಗುಂಜೂರು ಶಾಲೆ ಶಿಕ್ಷಕ ಜನಾರ್ಧನ್, ಕ್ವಿಸ್ ಪ್ರೈ ಲಿ. ಮುಖ್ಯಸ್ಥ ಅಶ್ವಿನ್ ಕುಮಾರ್ ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ