Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ಸೂರಿನಡಿ ರೈತರಿಗೆ ಬೇಕಾದ ರಸಗೊಬ್ಬರ ಪೂರೈಕೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು.30: ಒಂದೇ ಸೂರಿನಡಿ ರೈತರಿಗೆ ಬೇಕಾದ ರಸಗೊಬ್ಬರಗಳು ಜಿಲ್ಲೆಯಾದ್ಯಂತ ಸಕಾಲಕ್ಕೆ ದೊರೆಯುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಜಂಟಿ ನಿರ್ದೇಶಕಿ ಡಾ.ಲಲಿತಾ ರೆಡ್ಡಿ ತಿಳಿಸಿದರು.

ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್, ಟಿ.ಎ.ಪಿ.ಸಿ.ಎಂ.ಎಸ್ ಮತ್ತು ಕೃಷಿ ಇಲಾಖೆ. ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ರೈತರಿಗೆ ಪಿ.ಎಂ. ಕಿಸಾನ್ ಯೋಜನೆಯ 14 ನೇ ಕಂತಿನ ಆರ್ಥಿಕ ನೆರವನ್ನು ರಾಜಾಸ್ಥಾನದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸುತ್ತಿದ್ದು ಮತ್ತು ಸೊಸೈಟಿಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲಾ ಸಾಮಗ್ರಿಗಳನ್ನು ಒಂದೇ ಸೂರಿನಡಿ ದೊರೆಯಲು ಅನುಕೂಲ ಮಾಡಿದ್ದು , ರೈತರಿಗೆ ಬೇಕಾದ ರಸಗೊಬ್ಬರಗಳು ಜಿಲ್ಲೆಯಾದ್ಯಂತ ಸಕಾಲಕ್ಕೆ ದೊರೆಯುತ್ತಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಸಿ.ಇ.ಓ ನಿತಿನ್ ಕಂಟಕ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಅನೇಕ ಸೌಲಭ್ಯಗಳು ನೀಡುತ್ತಿದ್ದು , ರೈತರಿಗೆ ಬೇಕಾದ ಸಾಮಗ್ರಿಗಳನ್ನು ದೊಡ್ಡದೊಡ್ಡ ಮಳಿಗೆಗಳಲ್ಲಿ ದೊರೆಯುವಂತೆ ಮಾಡುತ್ತಿದ್ದು , ರೈತರು ಹೆಚ್ಚು ಹೆಚ್ಚು ಬೆಳೆಗಳನ್ನು ಬೆಳೆಯುವ ಎಲ್ಲಾ ವಿಚಾರಗಳನ್ನು ತಿಳಿಸುವ ಮತ್ತು ಅದರಿಂದ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಲಾಗುತ್ತಿದೆ ಎಂದು ತಿಳಿಸಿದರು.

ಇದೆ ವೇಳೆ ದೇವನಹಳ್ಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಶೀಲಮ್ಮ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ಈರಪ್ಪ ನಿರ್ದೇಶಕರಾದ ಗಂಗಾಧರ್, ಚನ್ನಕೃಷ್ಣಪ್ಪ, ರಮೇಶ್, ರಾಮಮೂರ್ತಿ, ಚಂದ್ರಶೇಖರ್, ಭಾಗ್ಯಮ್ಮ, ರೈತರು ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ