Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆದರಿಕೆ ಒಡ್ಡುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.22: ರಾಜ್ಯದಲ್ಲಿ ಸಾಹಿತಿಗಳಿಗೆ ರಕ್ಷಣೆ ನೀಡಲು ಮತ್ತು ಅವರಿಗೆ ಬೆದರಿಕೆ ಒಡ್ಡುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಸಾಹಿತಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಾಹಿತಿಗಳಿಗೆ ಈಗಾಗಲೇ ಭದ್ರತೆ ಒದಗಿಸಲಾಗಿದೆ. ಆದರೆ, ಸಾಹಿತಿಗಳ ಕೋರಿಕೆಯಂತೆ ಬೆದರಿಕೆಯ ಹಿಂದೆ ಕೆಲ ದುಷ್ಟ ಶಕ್ತಿಗಳು ಕೆಲಸ ಮಾಡುತ್ತಿವೆ. ಅಂತಹವರನ್ನು ಪತ್ತೆ ಮಾಡಲು ಸಾಹಿತಿಗಳು ಕೋರಿದ್ದು, ಅದರಂತೆ ತಂಡ ರಚನೆ ಮಾಡಲಾಗುವುದು ಮತ್ತು ಅವರಿಗೆ ಹೆಚ್ಚಿನ ಭದ್ರತೆಯನ್ನು ಸಹ ಒದಗಿಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅವರು, ಈ ಹಿಂದೆ ಎಂ.ಎಂ. ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರಿಗೂ ಸಹ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದರೂ ಅವರನ್ನು ಜೀವಂತವಾಗಿ ಉಳಿಸಿಕೊಳ್ಳಲು ಆಗಲಿಲ್ಲ. ಕೇವಲ ಪೊಲೀಸ್ ಭದ್ರತೆ ಒದಗಿಸುವುದರಿಂದ ರಕ್ಷಣೆ ಸಾಧ್ಯವಿಲ್ಲ. ಸಾಹಿತಿಗಳಿಗೆ ಬೆದರಿಕೆ ಒಡ್ಡಲು ಗುಂಪೇ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದು ಅದನ್ನು ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.

ಬಂಜಗೆರೆ ಜಯಪ್ರಕಾಶ್ ಮತ್ತು ಕೆಲ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಒಕ್ಕಣಿಕೆ ಒಬ್ಬರೇ ಬರೆದಿದ್ದರಿಂದ ಇದು ಕೇವಲ ಒಬ್ಬ ವ್ಯಕ್ತಿಯ ಕೆಲಸ ಅಲ್ಲ. ಸಾಹಿತಿಗಳ ಧ್ವನಿ ಅಡಗಿಸಲು ಒಂದು ಗುಂಪು ಕೆಲಸ ಮಾಡುತ್ತಿದೆ ಎಂದು ನಮಗೆ ಅನ್ನಿಸುತ್ತಿದೆ. ಕಾರಣ ನಮಗೆ ಭದ್ರತೆ ನೀಡುವುದಕ್ಕಿಂತ ದುಷ್ಕರ್ಮಿಗಳ ಗುಂಪು ಪತ್ತೆಹಚ್ಚಿ ಕ್ರಮ ಕೈಗೊಳ್ಳಿ ಎಂದರು.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಸಾಹಿತಿಗಳಾದ ಜಿ. ರಾಮಕೃಷ್ಣ, ಡಾ.ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ ಮತ್ತಿತರರು ಇದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮರುಳಸಿದ್ದಪ್ಪ ಅವರು, ಬಿಜೆಪಿ ವಿರುದ್ಧ ಮಾತನಾಡುವ ಸಾಹಿತಿಗಳಿಗೆ ರಕ್ಷಣೆ ನೀಡಬೇಕು ಎಂದು ಹೇಳಿದ ಅವರು ಈ ಬೆದರಿಕೆ ಹಿಂದೆ ಇರುವ ಷ್ಯಡ್ಯಂತ ಬಯಲಾಗಲಿ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ