Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 24: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಅವಿರೋಧ ಆಯ್ಕೆ ಆಗಿದ್ದಾರೆ.

ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.

ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ತಮ್ಮ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಈ ಸಭೆಯಲ್ಲಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರೂ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್ ನ ಎಲ್ಲಾ ಸದಸ್ಯರು ಹಾಜರಿದ್ದರು.

ಸದನದಲ್ಲಿ ವಿಷಯಾಧಾರಿತ ಹೋರಾಟ:

ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತಿದೆ ಎಂದಾಕ್ಷಣ ಎದೆಗುಂದುವ ಅಗತ್ಯ ಇಲ್ಲ. ಇನ್ನೂ ಕೆಚ್ಚೆದೆಯಿಂದ ಪಕ್ಷವನ್ನು ಕಟ್ಟಬೇಕಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿತವಚನ ಹೇಳಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಅವರು ಸಭಾಧ್ಯಕ್ಷರ ಕಚೇರಿಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಮ್ಮನ್ನು ಗೆಲ್ಲಿಸಿದ ಚನ್ನಪಟ್ಟಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ