ಗುರುಕುಲ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ
ಸುದ್ದಿಮೂಲ ವಾರ್ತೆ
ಆನೇಕಲ್, ಜು 15 : ತಾಲೂಕಿನ ಸೂರ್ಯನಗರ ಎರಡನೇ ಹಂತದಲ್ಲಿರುವ ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಾವೇರಿ ಹಾಸ್ಪಿಟಲ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.
ರಾಜಾಪುರ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪೋಷಕರು ಮತ್ತು ಸ್ಥಳೀಯ ರೈತರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು .
ಶಿಬಿರದಲ್ಲಿ ಬಿಪಿ, ಶುಗರ್, ಇಸಿಜಿ ಉಚಿತ ಮಾತ್ರೆಗಳ ವಿತರಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಯಿತು. ಇನ್ನೂ ಈಗಿನ ಕಾಲದಲ್ಲಿ ಜೀವನಶೈಲಿ ಬದಲಾದಂತೆ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿದೆ . ತಿನ್ನುವ ಪದಾರ್ಥದಿಂದಲೇ ಶೇಕಡ 90ರಷ್ಟು ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ, ಉತ್ತಮ ವ್ಯಾಯಾಮ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವೈದ್ಯರು ತಿಳಿಸಿದರು.
ಕಾವೇರಿ ಹಾಸ್ಪಿಟಲ್ ಸಂಸ್ಥೆ ಮತ್ತು ದಯಾನಂದ ವೈದ್ಯರು ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ. ಇಲ್ಲಿನ ರೈತರು ಮತ್ತು ಸ್ಥಳೀಯರು ಇದನ್ನ ಉಪಯೋಗ ಮಾಡಿಕೊಳ್ಳಬೇಕು ಎಂದು ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.