Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಡಿ ಭಾಗದಲ್ಲಿ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಆನೇಕಲ್‌, ಸೆ. 29 : ಬೆಂಗಳೂರಿನ ಗಡಿ ಪ್ರದೇಶ ಆನೇಕಲ್ ನಲ್ಲೂ ಸಹ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದೆಲ್ಲೆಡೆ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿತ್ತು. ಮೊದಲಿಗೆ ಆನೇಕಲ್ ಸೋಲೂರು ಗಡಿಯಲ್ಲಿ ಕರವೇ ಶಿವರಾಮೇಗೌಡರ ಬಣದ ವತಿಯಿಂದ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯನ್ನು ನಡೆಸಲಾಯಿತು.

ಅತ್ತಿಬೆಲೆ ಗಡಿ ಗೋಪುರದ ಬಳಿ ಮೊದಲು ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಸ್ತೆ ತಡೆಗೆ ಮುಂದಾಗಿ ಪ್ರತಿಭಟಿಸಿದರು. ಇದೇ ಸಮಯದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕನ್ನಡ ಜಾಗೃತಿ ವೇದಿಕೆ ಮಂಜುನಾಥ ದೇವ ನೇತೃತ್ವದಲ್ಲಿ ರ್ಯಾಲಿ ನಡೆಸಿ ಗಡಿಗೆ ಮುತ್ತಿಗೆ ಹಾಕಿದರು. ಈ ಸಮಯದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ್ ದೇವ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಛೀಮಾರಿಯನ್ನು ಹಾಕಿ, ಕಾವೇರಿ ನೀರನ್ನು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಿದರು.

ಕನ್ನಡಪರ ಸಂಘಟನೆಗಳು ಸಹ ಸೇರಿ ಅತ್ತಿಬೆಲೆ ಗಡಿಗೆ ಮುತ್ತಿಗೆಯನ್ನು ಹಾಕಿದ್ದರು. ಪ್ರತಿಭಟನಾಕಾರರ ಜೊತೆಗೆ ಪುಟಾಣಿ ಮಕ್ಕಳು ಸಹ ಕಾವೇರಿ ನಮ್ಮದು ಎನ್ನುವ ಘೋಷಣೆಯನ್ನು ಕೂಗಿ ಕರ್ನಾಟಕದ ಬಾವುಟವನ್ನು ಹಿಡಿದು ಕಾವೇರಿ ಪರ ಧ್ವನಿ ಎತ್ತಿದ ದೃಶ್ಯ ಕಂಡುಬಂದಿತು.

ಸುಮಾರು 300ಕ್ಕೂ ಹೆಚ್ಚು ಮಂದಿ ಕನ್ನಡಪರ ಹೋರಾಟಗಾರರು ಹೆದ್ದಾರಿಯನ್ನು ಸಂಪೂರ್ಣವಾಗಿ ಮುತ್ತಿಗೆ ಹಾಕಿ ತಡೆಹಿಡಿದರು.ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನೆಕಾರರಿಗೂ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು.

ತಮಿಳುನಾಡು ನೀರನ್ನು ಯಾವ ರೀತಿ ಉಪಯೋಗಿಸುತ್ತಿದೆ ಎಂಬುದರ ಬಗ್ಗೆ ಅಣುಕು ಪ್ರದರ್ಶನವನ್ನು ಸಹ ಪ್ರತಿಭಟನಾಕಾರರು ಮಾಡಿ ಸರ್ಕಾರದ ಗಮನವನ್ನು ಸೆಳೆದಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ