Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರು ಶೌಚಾಲಯ ಬಳಸಲು ಜಿಪಂ ಸಿಇಓ ಸಲಹೆ

ಸುದ್ದಿಮೂಲವಾರ್ತೆ

ಕೊಪ್ಪಳ ಜುಲೈ 07: ಕಲ್ ತಾವರಗೇರಾ ಗ್ರಾಮ ಪಂಚಾಯತನ ಕುಕನಪಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸ್ವಚ್ಛ ಭಾರತ್ ಮಿಷನ್ ಹಾಗೂ ಸಿಡಿಡಿ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ "ಲೈಟ್ ಹೌಸ್ ಇನಿಶಿಯೇಟಿವ್" ಕಾರ್ಯಕ್ರಮ ಜರುಗಿತು.

ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಪ್ರತಿಯೊಬ್ಬರು ಶೌಚಾಲಯ ಬಳಸಬೇಕು. ಬಯಲು ಶೌಚದಿಂದ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತದೆ. ಪರಿಸರ ಅನೈರ್ಮಲ್ಯದಿಂದ ವಾಂತಿ ಬೇಧಿ ಪ್ರಕರಣಗಳು ಉಂಟಾಗುತ್ತವೆ. ಮನೆಯ ಕಸವನ್ನು ಅಲ್ಲಿಯೇ ಹಸಿ ಹಾಗೂ ಒಣ ಕಸ ಎಂದು ಬೇರ್ಪಡಿಸಿ ಕಾಂಪೋಸ್ಟ್ ಮಾಡಬೇಕು. ಒಣ ಕಸವನ್ನು ಗ್ರಾಮ ಪಂಚಾಯತನಿಂದ ಬರುವ ಸ್ವಚ್ಛತಾ ವಾಹಿನಿಗೆ ನೀಡಬೇಕು ಎಂದು ತಿಳಿಸಿದರು. ಜೊತೆಗೆ ಸಮುದಾಯ ಶೌಚಾಲಯ ನಿರ್ವಹಣೆ ಕೂಡ ಸಾರ್ವಜನಿಕರ ಹೊಣೆಯಾಗಿದೆ. ಪ್ರತಿಯೊಂದು ಕುಟುಂಬದವರು ಇಂಗು ಗುಂಡಿ ನಿರ್ಮಾಣ ಮಾಡಿ ಗ್ರಾಮದ ಸ್ವಚ್ಛತೆಗೆ ಸಹಕರಿಸಬೇಕು ಎಂದರು.

ಶಾಲಾ ಮಕ್ಕಳು ಮನೆಯಲ್ಲಿ

ಪಾಲಕರಿಗೆ ಸ್ವಚ್ಛತೆ ಕುರಿತು ಮಾಹಿತಿ ನೀಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಶಿಶು ಅಭಿವೃದ್ಧಿ ಅಧಿಕಾರಿಗಳು, ಸಿಡಿಡಿ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಮುಖ್ಯಾಧ್ಯಾಪಕರು, ಗ್ರಾಮ ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಶಿಕ್ಷಕರು, ಎಸ್ಬಿಎಂಜಿ ಸಮಾಲೋಚಕರು, ಶಾಲಾ ಮಕ್ಕಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಡಿಪಿಎಂ, ಟಿಪಿಎಂ ಸ್ವ- ಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ ಸಿಬ್ಬಂದಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ