Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ರೈಲುಗಳ ಸೇವೆ ಕೂಡ ಹೆಚ್ಚಾಗಿ ಬೇಕಾಗಿದೆ:ಸಂಸದ ಜಿಎಸ್ ಬಸವರಾಜು

 

ಜೂ.20:ತಿಪಟೂರು ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ರೈಲಿನ ಸೇವೆಯನ್ನು ಪ್ರಯಾಣಿಕರಿಗೆ ದೊರಕಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಈ ಭಾಗದಲ್ಲಿ ರೈಲುಗಳ ಸೇವೆ ಕೂಡ ಹೆಚ್ಚಾಗಿ ಬೇಕು ಎಂದು ಸಂಸದ ಜಿಎಸ್ ಬಸವರಾಜು ಹೇಳಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ ಮಾತನಾಡಿದವರು, ಭಾರತದಲ್ಲಿ ನಿರ್ಮಾಣವಾಗಿರುವ ಸ್ವದೇಶಿ ರೈಲು ಇದಾಗಿದೆ, ಈಗಾಗಲೇ ವಿದ್ಯುದ್ದೀಕರಣ ಮೂಲಕ ರೈಲುಗಳು ಓಡಾಡುತ್ತಿದ್ದು, ಈ ಭಾಗದಲ್ಲಿ 28 ರೈಲುಗಳು ಪ್ರತಿನಿತ್ಯ ಓಡಾಡುತ್ತವೆ, ಇನ್ನೂ ಹೆಚ್ಚಿನ ರೈಲುಗಳು ಪ್ರಯಾಣಿಕರ ಅನುಕೂಲಕ್ಕಾಗಿ ಬೇಕಾಗಿದೆ ಎಂದು ಹೇಳಿದರು.

ಶಾಸಕ ಕೆ ಷಡಕ್ಷರಿ ಮಾತನಾಡಿ, ವಾಣಿಜ್ಯ, ಶೈಕ್ಷಣಿಕ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಕಲ್ಪತರು ನಾಡು ತಿಪಟೂರು ಅಭಿವೃದ್ಧಿ ಹೊಂದುತ್ತಿದ್ದು, ಜನ ಶತಾಬ್ದಿ ರೈಲು ಸೇರಿದಂತೆ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆ ಇಲ್ಲಿ ಆಗಬೇಕಿದೆ ಎಂದು ಹೇಳಿದರು.

ಮಾಜಿ ಸಚಿವ ಬಿ ಸಿ ನಾಗೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವದೇಶಿ ನಿರ್ಮಿತ ವಂದೇ ಭಾರತ್ ಎಕ್ಸ್ಪ್ರೆಸ್ ಐದು ರೈಲಿನ ಉದ್ಘಾಟನೆಯನ್ನು ಮಾಡಿದ್ದಾರೆ, 480 ಕಿಲೋಮೀಟರ್ 6 ಗಂಟೆ 30 ನಿಮಿಷದಲ್ಲಿ ತಲುಪುವ ಈ ರೈಲು, ದೇಶದ ಹೆಗ್ಗಳಿಕೆಯಾಗಿದೆ, ಮುಂಬರುವ ದಿನಗಳಲ್ಲಿ ತಿಪಟೂರಿನಲ್ಲಿ ಕೂಡ ಈ ರೈಲು ನಿಲ್ಲಿಸಲು ಮನವಿ ಮಾಡುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕಲ್ಪಶ್ರೀ, ತಹಸೀಲ್ದಾರ್ ಪವನ್ ಕುಮಾರ್, ತಾಲೂಕು ಪಂಚಾಯಿತಿ ನಿರ್ವಹಣಾಧಿಕಾರಿ ಸುದರ್ಶನ್, ರೈಲ್ವೆ ಸ್ಟೇಷನ್ ಮಾಸ್ಟರ್ ಹರಿಲಾಲ್ ಮೀನಾ, ಆಲ್ ಇಂಡಿಯಾ ರೈಲ್ವೆ ಟ್ರ್ಯಾಕ್ ಮೇಂಟೇನರ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂತರಾಜು ಎ ವಿ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ