Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಆಟಗಳಿಂದ ಸಾಮರಸ್ಯ ಬೆಳೆಯುತ್ತದೆ: ಟಿ.ವಿ.ನಾಗರಾಜ

ಸುದ್ದಿಮೂಲ ವಾರ್ತೆ

ಚಿಂತಾಮಣಿ, ಆ.27: ಗ್ರಾಮೀಣ ಆಟಗಳಿಂದ ಗ್ರಾಮಗಳಲ್ಲಿ ಸಾಮರಸ್ಯ, ಸೌಹಾರ್ದತೆ ಬೆಳೆಯುತ್ತದೆ. ದ್ವೇಷ, ಅಸೂಯೆ ಮಾಯವಾಗುತ್ತದೆ ಎಂದು ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಟಿ.ವಿ.ನಾಗರಾಜ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತಳಗವಾರ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ ಚಿಂತಾಮಣಿ ಘಟಕದ ವತಿಯಿಂದ ವಿಶ್ವ ಜಾನಪದ ದಿನಾಚರಣೆಯ ಅಂಗವಾಗಿ ಹುಲಿಗೆತ್ತು ಗ್ರಾಮೀಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯರನ್ನು ಕೇಳಿದರೆ ಈಗಲೂ ಒಂದು ಕಥೆ ಹೇಳಿಯೇ ಹೇಳುತ್ತಾರೆ. ಜಾನಪದ ಕಥೆ ಎಂದರೆ ಜ್ಞಾನ, ತಿಳುವಳಿಕೆ. ಮರೆಯಾಗುತ್ತಿರುವ ಗ್ರಾಮೀಣ ಆಟಗಳನ್ನು ಬೆಳೆಸಬೇಕಾಗಿದೆ ಗ್ರಾಮೀಣ ಆಟಗಳಿಂದ ಮಕ್ಕಳಲ್ಲಿ ತುಂಟತನ ಮಾಯವಾಗಿ ಏಕಾಗ್ರತೆ, ದೂರದೃಷ್ಟಿ ಬೆಳೆಯುತ್ತದೆ. ಮಕ್ಕಳನ್ನು ಮೊಬೈಲ್, ದೂರದರ್ಶದಿಂದ ಮುಕ್ತಿಗೊಳಿಸಿ ಗ್ರಾಮೀಣ ಆಟಗಳ ಪರಿಚಯವನ್ನು ಮಾಡಿಸಬೇಕಾಗಿದೆ ಎಂದರು.

ಹಿಂದೆ ಹಿರಿಯರು ತಮ್ಮ ಬೇಸರ, ಬೇಜಾರು ಕಳೆಯಲು ಗ್ರಾಮೀಣ ಆಟಗಳನ್ನು ಆಡುತ್ತಿದ್ದರು. ಈಗ ಮನೆಯಲ್ಲಿ ಹೆಣ್ಣುಮಕ್ಕಳು ಕುಳಿತು ಆಡುವ ಗ್ರಾಮೀಣ ಆಟಗಳನ್ನು ಮನೆಗಳಲ್ಲಿ ಆಡಿದರೆ ಮನೆಯವರ ಪರಸ್ಪರ ವೈಯಕ್ತಿಯ ದ್ವೇಷಗಳನ್ನು ಕಳೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಚಿಂತಾಮಣಿ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಲೀಲಾ ಲಕ್ಷ್ಮಿನಾರಾಯಣ್ ಮಾತನಾಡಿ ಗ್ರಾಮೀಣ ಕ್ರೀಡೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮೊದಲಿಗೆ ಹುಲಿಗೆತ್ತು (ಹುಲಿ-ಕುರಿ) ಎಂಬ ಅಪ್ಪಟ ಗ್ರಾಮೀಣ ಕ್ರೀಡೆಯನ್ನು ಪ್ರಯೋಗಾತ್ಮಕವಾಗಿ ಸಂಘಟಿಸಲಾಗುತ್ತಿದೆ. ಇದರೊಂದಿಗೆ ಹಲವಾರು ಕ್ರೀಡೆಗಳನ್ನು ರಾಜ್ಯಮಟ್ಟದಲ್ಲಿ ಜನಪ್ರಿಯಗೊಳಿಸುವ ಕಾರ್ಯಕ್ರಮಗಳು ಇವೆ ಎಂದರು.

ಪ್ರವಚನಕಾರ ತಳಗವಾರ ಆನಂದ್ ಮಾತನಾಡಿ ಜಾನಪದ ಸಾಹಿತ್ಯ, ಕಲೆ, ಸಂಸ್ಕöÈತಿ ಇದು ಹಿರಿಯರ ಅನುಭವದ ಸಾರವಾಗಿದೆ. ಇಂದಿನ ಆಧುನಿಕ ಯುಗದ ಜೀವನ ಶೈಲಿಯ ಒತ್ತಡಗಳನ್ನು ನಿವಾರಿಸಲು ಈ ಗ್ರಾಮೀಣ ಆಟಗಳು ಸಹಕಾರಿಯಾಗಿದೆ. ಮನಸ್ಸನ್ನು ಉಲ್ಲಾಸವಾಗಿಡಲು, ಚೇತೋಹಾರಿಯಾಗಿಡಲು ಗ್ರಾಮೀಣ ಆಟಗಳು ಪ್ರಯೋಜನಕಾರಿಯಾಗಿದೆ ಇವುಗಳನ್ನು ಈಗ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದರು.

ಹುಲಿಗೆತ್ತು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಭಾರತಿ ಪ್ರಾರ್ಥನೆಯನ್ನು ಮಾಡಿದರು, ಸಾಹಿತಿ ಸೀತಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ