Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರಕ್ಕೆೆ ಎಚ್.ಡಿ. ಕುಮಾರಸ್ವಾಾಮಿ ತರಾಟೆ ಸೋಮಾರಿತನ ಬಿಟ್ಟು ನೆರೆ ಸಂತ್ರಸ್ತರ ನೆರವಿಗೆ ಬನ್ನಿಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.30:
ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ. ಸೋಮಾರಿತನ ಬಿಟ್ಟು ತಕ್ಷಣವೇ ಕಲ್ಯಾಾಣ ಕರ್ನಾಟಕಕ್ಕೆೆ ನೆರೆ ಪರಿಹಾರ ಪ್ಯಾಾಕೇಜ್ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋೋಶ ವ್ಯಕ್ತಪಡಿಸಿದರು.
ನವದೆಹಲಿಯಲ್ಲಿ ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಿಯಲ್ಲಿ ಮಾತನಾಡಿದ ಸಚಿವರು; ಕಲ್ಯಾಾಣ ಕರ್ನಾಟಕದಲ್ಲಿ ನೆರೆ ಸಂಕಷ್ಟದಲ್ಲಿ ಜನರಿದ್ದರೆ ರಾಜ್ಯದಲ್ಲಿರುವ ಸರಕಾರ ಕುಂಭಕರ್ಣ ನಿದ್ರೆೆಯಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಮುಖ್ಯಮಂತ್ರಿಿಗಳು ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆೆ. ಕಳೆದ 3 ತಿಂಗಳಿಂದ ಈ ಸರಕಾರ ಗಾಢ ನಿದ್ರೆೆಯಲ್ಲಿತ್ತು ಎಂದು ಕುಮಾರಸ್ವಾಾಮಿ ಅವರು ಕಿಡಿಕಾರಿದರು.
ಸಿಎಂ ಹೇಳಿಕೆ ಬಗ್ಗೆೆ ನಿರಾಶೆ ಆಗಿದೆ:
ಪರಿಹಾರಕ್ಕೆೆ ಒತ್ತಾಾಯ ಮಾಡುತ್ತಿಿರುವ ಪ್ರತಿಪಕ್ಷಗಳ ಬಗ್ಗೆೆ ಮುಖ್ಯಮಂತ್ರಿಿ ನೀಡುತ್ತಿಿರುವ ಉತ್ತರ, ಹೇಳಿಕೆಗಳನ್ನು ನೋಡಿದರೆ ನಿರಾಶೆಯಾಗುತ್ತದೆ. ಪ್ರತಿಪಕ್ಷವನ್ನು ಬೈದರೆ ನೆರೆ ಸಂತ್ರಸ್ತರ ಸಮಸ್ಯೆೆ ನೀಗುತ್ತದೆಯೇ? ಅವರ ಹೇಳಿಕೆಗಳು ಅವರು ಅಲಂಕರಿಸುವ ಹುದ್ದೆಗೆ ತಕ್ಕುದಾಗಿಲ್ಲ. ಸಂಪುಟದಲ್ಲಿ 36 ಜನ ಮಂತ್ರಿಿಗಳಿದ್ದಾರೆ. ಅವರೆಲ್ಲರೂ ಎಲ್ಲಿ ಹೋಗಿದ್ದಾರೆ? ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡಿದ್ದು ಸಾಕು ಎಂದು ಗುಡುಗಿದ ಅವರು; ಮೊದಲು ಜಡತ್ವ ಬಿಟ್ಟು ಪ್ರತೀ ಜಿಲ್ಲೆಗೂ ಇಬ್ಬರು-ಮೂವರು ಮಂತ್ರಿಿಗಳನ್ನು ಕಳಿಸಿ. ವಿಶೇಷ ತಂಡಗಳನ್ನು ನಿಯೋಜಿಸಿ. ಸಚಿವರು ಕನಿಷ್ಠ 3 ದಿನ ಜಿಲ್ಲೆಗಳಲ್ಲಿಯೇ ಮೊಕ್ಕಂ ಹೂಡಲಿ. ಮೊದಲು ಜನರ ಬಳಿಗೆ ಹೋಗಿ ಅವರ ಕಷ್ಟಕ್ಕೆೆ ಮಿಡಿಯಲಿ ಎಂದು ಒತ್ತಾಾಯಿಸಿದರು.
ನನಗೆ ಆರೋಗ್ಯ ಸಮಸ್ಯೆೆ ಇಲ್ಲದೇ ಇದ್ದಿದ್ದರೆ ನೆರೆಪೀಡಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ವಾರ ಕಾಳವಾದರೂ ಕ್ಯಾಾಂಪ್ ಮಾಡುತ್ತಿಿದ್ದೆ. ಇನ್ನೊೊಂದು ಕಡೆ 2 ದಿನಗಳ ಹಿಂದೆಯೇ ನಾನು ನೆರೆ ಪ್ರದೇಶಗಳಿಗೆ ಹೋಗಲು ಸಿದ್ದವಾಗಿದ್ದೆ. ಹವಾಮಾನ ಸರಿ ಇಲ್ಲದ ಕಾರಣ ಅಧಿಕಾರಿಗಳು ಬರಬೇಡಿ ಎಂದರು. ಪ್ರವಾಹ ಬಂದು ಎರಡುಮೂರು ದಿನಗಳು ಆದ ಮೇಲೆ ಮಂತ್ರಿಿಗಳು ಕಾಟಾಚಾರಕ್ಕೆೆ ಭೇಟಿ ನೀಡಿದ್ದಾರೆ. ಹೀಗೆ ಮಾಡಿದರೆ ಹೇಗೆ? ಎಂದು ಕುಮಾರಸ್ವಾಾಮಿ ಅವರು ರಾಜ್ಯ ಸರಕಾರವನ್ನು ಪ್ರಶ್ನೆೆ ಮಾಡಿದರು.
ಪದೇಪದೆ ಕೇಂದ್ರ ಸರಕಾರದ ಜೊತೆ ಘರ್ಷಣೆ ಮಾಡಿಕೊಳ್ಳಬೇಡಿ. ಅದರಿಂದ ಉಪಯೋಗ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಾಸ ಇಡಿ. ಸರಿಯಾದ ರೀತಿಯಲ್ಲಿ ಮನವಿ ಕೊಟ್ಟು ಪರಿಹಾರ ಕೇಳಿದರೆ ಕೇಂದ್ರದ ನೆರವು ಸಿಗುತ್ತದೆ. ಮೊದಲು ಒರಟು ಮಾತು ಬಿಡಿ. ಈವರೆಗೂ ರಾಜ್ಯದ ಒಬ್ಬ ಸಚಿವ ಅಥವಾ ಅಧಿಕಾರಿ ರಾಜ್ಯವನ್ನು ಪ್ರತಿನಿಧಿಸುತ್ತಿಿರುವ ಕೇಂದ್ರ ಸಚಿವರನ್ನು ಭೇಟಿ ಮಾಡಿಲ್ಲ ಎಂದು ಅವರು ಹರಿಹಾಯ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ