Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲೆರಾಂಪುರ ಕುಂಚಿಟಿಗ ಮಹಾಂಸ್ಥಾನ ಮಠದಲ್ಲಿ ಆರೋಗ್ಯ ಶಿಬಿರ

 

ಸುದ್ದಿಮೂಲ ವಾರ್ತೆ

ಕೊರಟಗೆರೆ, ಜು.2: ಎಲ್ಲ ಭಾಗ್ಯಗಳಿಗಿಂತಲು ಶ್ರೇಷ್ಠ ಭಾಗ್ಯ ಎಂದರೆ ಅದು ಆರೋಗ್ಯ ಭಾಗ್ಯ. ಪ್ರತಿಯೊಬ್ಬರೂ ಈ ಭಾಗ್ಯವನ್ನು ಪಡೆದುಕೊಳ್ಳಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ ತಿಳಿಸಿದರು.

ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಬೆಂಗಳೂರಿನ ಹೆಸರುಘಟ್ಟದ ಸಪ್ತಗಿರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು, ಸ್ಪರ್ಶ ಆಸ್ಪತ್ರೆ ಮತ್ತು ಕುಂಚಿಟಿಗ ಮಹಾಂಸ್ಥಾನ ಮಠದ ನೇತೃತ್ವದಲ್ಲಿ ಮಠದ ಆವರಣದಲ್ಲಿ ನಡೆದ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನರಿಗೆ ಹಲವು ಆರೋಗ್ಯ ಸಮಸ್ಯೆಗೆ ತಜ್ಞ ವೈದ್ಯರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶ್ರೀಮಠದ ಸಹಯೋಗದೊಂದಿಗೆ ಶಿಬಿರನ್ನು ಆಯೋಜಸಿದ್ದು 250 ಕ್ಕೂ ಹೆಚ್ಚಿನ ಜನರು ವೈದ್ಯರಿಂದ ಸಲಹೆ ಮತ್ತು ಚಿಕಿತ್ಸೆಯನ್ನು ಪಡೆದಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ರೀತಿಯ ಸೌಲಭ್ಯಗಳೊಂದಿಗೆ ಶಿಬಿರ ನಡೆಸುವುದಾಗಿ ಹೇಳಿದರು.

ಶಿಬಿರದಲ್ಲಿ ಕಣ್ಣು, ರಕ್ತ ಸಂಬಂಧಿ, ಹೃದಯ ಸಂಬಂಧಿ, ಮೂಳೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಸಲಹೆ ಮತ್ತು ಚಿಕತ್ಸೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಕರಾದ ದಿವ್ಯ ಕೀರ್ತಿ ಹೆಚ್.ಎನ್,ಯಲಗೆರೆ ಉಮೇಶ್, ರವಿಕುಮಾರ್, ವೇಣು,ಚಂದ್ರಶೇಖರ್ ,ತಜ್ಞ ವೈದ್ಯರುಗಳಾದ ಡಾ. ನಿಕಿಲ್ ರಂಗನಾಥ್, ಡಾ. ನಿಂಗರಾಜು, ಡಾ.ಸುಶ್ಮಿತ, ಡಾ. ಮೇಘಶ್ರೀ, ಡಾ. ಅಮೃತ, ಡಾ. ಸುನಿತ, ಡಾ. ಪ್ರಿಯಾ ಕುಮಾರಿ ಸೇರಿದಂತೆ ಇತರರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ