Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಪಟೂರಿನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಮೂಲ ವಾರ್ತೆ

ತಿಪಟೂರು, ಸೆ. 11 : ಆರೋಗ್ಯಕ್ಕಿಂತ ಮತ್ತೊಂದು ಆಸ್ತಿ ಇಲ್ಲ. ಆರೋಗ್ಯ ಹದಗೆಟ್ಟಾಗ ವೈದ್ಯರೇ ದೇವರು ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.



ನೊಣವಿನಕೆರೆ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆದಿಚುಂಚನಗಿರಿ ಆಸ್ಪತ್ರೆ, ಕುಮಾರ ಆಸ್ಪತ್ರೆ, ಶ್ರೀರಂಗ ಆಸ್ಪತ್ರೆಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಎಲ್ಲಾ ಖಾಯಿಲೆಗಳ ಉಚಿತ ತಪಾಸಣೆ, ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ಜೀವನಶೈಲಿ ಬದಲಾವಣೆಯಾಗಿದ್ದು ಯಾವ ಸಮಯದಲ್ಲಾದರೂ ರೋಗ ದೇಹವನ್ನು ಆಕ್ರಮಿಸಿಕೊಳ್ಳಬಹುದು. ಆರೋಗ್ಯದ ಸ್ವಾಸ್ಥ್ಯವಿಲ್ಲದ ಜೀವನ ಸಾಧನೆಗೆ ಅಡ್ಡಿಯಾಗುತ್ತದೆ. ಆರೋಗ್ಯದಿಂದ ನೆಮ್ಮದಿ ಮತ್ತು ಸುಂದರ ಕುಟುಂಬ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು.

ದಸರಿಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿ, ಈ ತಾಲ್ಲೂಕಿನಲ್ಲಿ ಶ್ರೀಧರ್ ಮತ್ತು ವಿವೇಚನ್ ವೈದ್ಯರುಗಳು ಸೇವೆ ಸಲ್ಲಿಸುತ್ತಿದ್ದಾರೆ. ಯಾವುದೇ ಹೃದಯ ಸಂಬಂಧಿ ಖಾಯಿಲೆಗಳಿದ್ದರೆ ವಿವೇಚನ್ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.

ಕುಮಾರ್ ಆಸ್ಪತ್ರೆ ಡಾ. ಶ್ರೀಧರ್ ಮಾತನಾಡಿ, ಜನರು ಒತ್ತಡ ಮರೆತು ನೆಮ್ಮದಿಯ ಸಂತಸದ ಜೀವನ ನಡೆಸಿ ಪರೋಪಕಾರ ಭಾವನೆ ಬಂದಾಗ ಉತ್ತಮ ಆರೋಗ್ಯ ನಿಮ್ಮದಾಗಿರುತ್ತದೆ ಎಂದರು.

ಆರೋಗ್ಯ ಶಿಬಿರದಲ್ಲಿ 2 ಸಾವಿರಕ್ಕೂ ಅಧಿಕ ಜನರು ನೋಂದಣಿಯಾಗಿ ಉಚಿತ ನುರಿತ 40ಕ್ಕೂ ಅಧಿಕ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ