Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಕ್ರಾಮಿಕ ರೋಗಗಳ ಬಗ್ಗೆ ನಿರ್ಲಕ್ಷ್ಯ ಬೇಡ : ಆರೋಗ್ಯ ನಿರೀಕ್ಷಕ ಗುರುರಾಜ್

ಸುದ್ದಿಮೂಲ ವಾರ್ತೆ

ಹೊಸಕೋಟೆ,ಜೂ.23 : ಮನುಷ್ಯನಿಂದ ಮನುಷ್ಯನಿಗೆ ಹರಡುವಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗುವುದು ಅತ್ಯವಶ್ಯಕ, ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕ ಗುರುರಾಜ್‌ ತಿಳಿಸಿದರು.

ನಗರದ 39ನೇ ಬಿಎಂಟಿಸಿ ಘಟಕದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಲಾರ್ವ ಸಮೀಕ್ಷೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಳೆಗಾಲದ ಸಮಯದಲ್ಲಿ ಕೀಟಜನ್ಯ ರೋಗಗಳಾದ ಡೆಂಘಿ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆಯನ್ನು ಆರೋಗ್ಯ ಇಲಾಖೆ ವಹಿಸಿದೆ. ಆದರ ಭಾಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಆದ್ದರಿಂದ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವಂಹವರು ಸಾಂಕ್ರಾಮಿಕ ರೋಗಗಳ ಮುನ್ಸೂಚನೆ ಬಂದಾಗ ಯಾವುದೇ ಕಾರಣಕ್ಕೂ

ನಿರ್ಲಕ್ಷ್ಯ ಮಾಡದೆ ತ್ವರಿತವಾಗಿ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ನಟರಾಜು ಮಾತನಾಡಿ, ಬಿಎಂಟಿಸಿ ಸಿಬ್ಬಂದಿಗಳು ಪ್ರತಿ ನಿತ್ಯ ಸಾವಿರಾರು ಜನರ ಮಧ್ಯೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಸಾಂಕ್ರಾಮಿಕ ರೋಗಗಳ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಒಬ್ಬರಿಂದ ಒಬ್ಬರಿಗೆ ಹರಡುವ ಮಲೇರಿಯಾ, ಡೆಂಗ್ಯೂ ಜ್ವರದ ಬಗ್ಗೆ ಅಗತ್ಯ ಮುಂಜಾಗ್ರತೆ ತೆಗೆದುಕೊಳ್ಳಿ ಎಂದರು.

ತೀವ್ರತರ ಲಾರ್ವ ಸಮೀಕ್ಷೆ ನಡೆಸಿ ಲಾರ್ವ ಕಂಡು ಬಂದ ಸ್ಥಳಗಳಲ್ಲಿ ಸ್ವಚ್ಚಗೊಳಿಸಿ. ಟಾಮಿಫಾಸ್ ರಾಸಾಯನಿಕ ದ್ರಾವಣ ಸಿಂಪಡಣೆ ಮಾಡಿ ಲಾರ್ವ ನಿರ್ಮೂಲನೆ ಮಾಡಿ ಘಟಕದ ರೋಗವಾಹಕ ನಿಯಂತ್ರಣದ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು

ಈ ಸಂಧರ್ಭದಲ್ಲಿ ಬಿಎಂಟಿಸಿ ಘಟಕದ ವ್ಯವಸ್ಥಾಪಕ ಸೋಮಶೇಖರ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ನಟರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಪ್ಪ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ