Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಡಿಎಲ್ ಬ್ಲೈಂಡ್ ಶಾಲೆಯಲ್ಲಿ ವಿಶೇಷ ಶಿಕ್ಷಕರಿಗೆ ಸನ್ಮಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.5: ಐಡಿಎಲ್ ಬ್ಲೈಂಡ್ ಸ್ಕೂಲ್ ಗೆ 20 ವರ್ಷ ತುಂಬಿದ ಹಿನ್ನೆಲೆಯ ಜೊತೆಗೆ ವಿಶೇಷ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ದಿವ್ಯಾಂಗರಿಗೆ ಬೋಧನೆ ಮಾಡುವ 20 ಮಂದಿಗೆ ವಿಶೇಷ ಅಂಧ ಶಿಕ್ಷಕರನ್ನು ಸನ್ಮಾನಿಸಲಾಯಿತು.

ವಿಜಯನಗರದ ಕ್ಲಬ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳನ್ನು ಆರೈಕೆ ಮಾಡುವ, ಅವರ ಯೋಗ ಕ್ಷೇಮ ನೋಡಿಕೊಳ್ಳುವ ಮತ್ತು ಈ ವಲಯದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.

“ಪ್ರತಿಯೊಂದು ವಿಶೇಷ ವಿದ್ಯಾರ್ಥಿಯ ಯಶಸ್ಸಿನಲ್ಲಿ ಇಂತಹ ವಿಶೇಷ ಶಿಕ್ಷಕರ ಪಾತ್ರವಿದ್ದು, ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದು ತ್ರಾಸದಾಯಕವಲ್ಲ. ಆದರೆ ವಿಶೇಷ ಶಿಕ್ಷಕರಿಗೆ ಬೋಧಿಸುವುದು ನಿಜಕ್ಕೂ ಸವಾಲಿನ ಕೆಲಸ. ಇಂತಹ ಪ್ರಯತ್ನದಲ್ಲಿ ನಮ್ಮ ವಿಶೇಷ ಶಿಕ್ಷಕರು ಯಶಸ್ವಿಯಾಗಿದ್ದಾರೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶೈನಿ ಗ್ರೇಸ್ ಪಾಲ್ ಹೇಳಿದರು.

ಶಾಲೆಯ ಸಂಸ್ಥಾಪಕರಾದ ಡಾ.ಪಿ.ಕೆ. ಪಾಲ್ ಅವರ ಪ್ರಯತ್ನದಿಂದ 2003 ರಲ್ಲಿ ಈ ಶಾಲೆ ಆರಂಭವಾಗಿದ್ದು, ಅವರ ನಿಧನದ ನಂತರ ಡಾ. ಶೈನಿ ಗ್ರೇಸ್ ಪಾಲ್ ನೇತೃತ್ವದಲ್ಲಿ ಶಾಲೆ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಅಧ್ಯಕ್ಷ ಶೈನ್ ನೆರೊ-ಪಿಂಕ್ ವಾಟರ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ