Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕ ಕಾನೂನುಗಳನ್ನು ವಿರೋಧಿಸಿ ಬೈಕ್‌ರ್ಯಾಾಲಿ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ - ಪೂಜಾರ

ಸುದ್ದಿಮೂಲ ವಾರ್ತೆ ಸಿಂಧನೂರು, ೆ.12:
ಕೇಂದ್ರ ಸರಕಾರ ಹೊಸ ಕಾರ್ಮಿಕ ಕಾಯ್ದೆೆಗಳನ್ನು ಬಂಡವಾಳ ಶಾಹಿಗಳ ಪರವಾಗಿ ರಚಿಸಿದ್ದು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾಾರವಿದೆ ಎಂದು ಎಐಸಿಸಿಟಿಯು ರಾಜ್ಯ ಸಹಕಾರ್ಯದರ್ಶಿ ನಾಗರಾಜ ಪೂಜಾರ್ ಆಕ್ರೋೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ, ಮಾರಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಎಐಸಿಸಿಟಿಯುನಿಂದ ನಗರದ ಎಪಿಎಂಸಿ ಗಣೇಶ ಗುಡಿಯಿಂದ ಪ್ರವಾಸಿ ಮಂದಿರದವರೆಗೆ ಹಮ್ಮಿಿಕೊಂಡಿದ್ದ ಬೈಕ್ ರ್ಯಾಾಲಿಯ ನೇತೃತ್ವವಹಿಸಿ ಅವರು ಮಾತನಾಡಿದರು. ಈ ಹಿಂದೆ ಇದ್ದ 8 ಗಂಟೆ ಕೆಲಸದ ಅವಧಿ ಹೊಸ ಸಂಹಿತೆಗಳ ಮೂಲಕ 12 ಗಂಟೆಯವರೆಗೆ ವಿಸ್ತರಿಸಿವೆ. ಕಾರ್ಮಿಕರ ಹಕ್ಕುಗಳಿಗೆ ಚ್ಯುತಿ ಬಂದಾಗ, ಸಂಘಟನೆಗಳು ಹೋರಾಟ ನಡೆಸದಂತೆ ಪ್ರತಿಬಂಧಿಸಲಾಗಿದೆ. ಇದಕ್ಕಾಾಗಿ ಹಲವು ನಿಬಂಧನೆಗಳನ್ನು ತರುವ ಮೂಲಕ ಹೋರಾಟದ ಹಕ್ಕು ಕಿತ್ತುಕೊಳ್ಳಲಾಗಿದೆ. ಹೋರಾಟದಲ್ಲಿ ತೊಡಗಿದವರನ್ನು ಕೆಲಸದಿಂದ ತೆಗೆಯುವ ಮತ್ತು ಜೈಲಿಗೆ ಹಾಕುವ ಶಿಕ್ಷೆ ಗುರಿಪಡಿಸಲು ಅವಕಾಶ ಕಲ್ಪಿಿಸಲಾಗಿದೆ. ಕೇಂದ್ರ ಸರ್ಕಾರ ಪರೋಕ್ಷವಾಗಿ ಕಾರ್ಮಿಕರನ್ನು ಆಧುನಿಕ ಜೀತಪದ್ಧತಿಗೆ ತಳ್ಳಿಿದೆ ಎಂದು ಆಪಾದಿಸಿದರು.
ರ್ಯಾಾಲಿಯಲ್ಲಿ ಮುಖಂಡರಾದ ಸಿಪಿಐ(ಎಂಎಲ್) ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಬಸವರಾಜ ಕೊಂಡೆ, ಆಯರ್ಲಾ ತಾಲೂಕು ಸಂಚಾಲಕ ಆರ್.ಎಚ್.ಕಲಮಂಗಿ, ತುಂಗಭದ್ರಾಾ ಕಾರ್ಮಿಕ ಸಂಘ ತುರ್ವಿಹಾಳ ಉಪ ವಿಭಾಗದ ಅಧ್ಯಕ್ಷ ಶರಣಪ್ಪ ಉದ್ಬಾಾಳ, ಜವಳಗೇರಾ ವಿಭಾಗದ ಅಧ್ಯಕ್ಷ ವೀರೇಶ, ಘನತ್ಯಾಾಜ್ಯ ವಾಹನ ಚಾಲಕರ ಸಂಘದ ಮೌನೇಶ ಕವಿತಾಳ, ವೀರೇಶ ಕೇಸರಿ, ಬಸ್ ನಿಲ್ದಾಾಣ ಕಾರ್ಮಿಕರಾದ ಜಯಮ್ಮ, ಮಹಾದೇವಮ್ಮ, ಮಹಾಂಕಾಳಮ್ಮ, ರೈತನಗರ ಕ್ಯಾಾಂಪ್, ಹುಸೇನಪ್ಪ ಅರಳಹಳ್ಳಿಿ ಹಾಗೂ ನೂರಾರು ಕೃಷಿ ಕೂಲಿ ಕಾರ್ಮಿಕರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ