Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಾಲೂರು ಅಭಿವೃದ್ಧಿ ಸಾಧ್ಯ: ರಾಮೇಗೌಡ

ಸುದ್ದಿಮೂಲ ವಾರ್ತೆ
ಮಾಲೂರು, ಏ.18: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗ ಮಾಡಿದ ಅಭಿವೃದ್ಧಿ ಹಾಗೂ ಪ್ರಸ್ತುತ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತು ಜನತೆಯ ಅನುಕೂಲಕ್ಕಾಗಿ ರೂಪಿಸಿರುವ ಪಂಚರತ್ನ ಯೋಜನೆಯೇ ಜೆ.ಡಿ.ಎಸ್.ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ ಎಂದು ಮಾಲೂರು ವಿಧಾನಸಭಾಕ್ಷೇತ್ರದ ಜೆ.ಡಿ.ಎಸ್.ಅಭ್ಯರ್ಥಿ ಜಿ.ರಾಮೇಗೌಡ ತಿಳಿಸಿದರು.

ಅವರು ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನಾನು ಇಂಜಿನಿಯರ್ ಆಗಿದ್ದು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪಕ್ಷದ ಪ್ರಣಾಳಿಕೆಯೊಂದಿಗೆ ನನದೇ ಆದ ಅಜೆಂಡಾ ಹೊಂದಿದ್ದೇನೆ. ಕಳೆದ 20 ವರ್ಷಗಳಿಂದ ಪ್ರತಿ ದಿನ ಜನಸೇವೆ ಮಾಡುವ ಮೂಲಕ ಮನೆ
ಮನೆಗೆ ನನ್ನದೇ ಆದ ಸೇವೆ ಮಾಡಿದ್ದೇನೆ.ಕ್ಷೇತ್ರದ ಜನತೆಯ ಸೇವೆಯನ್ನು ರಾಜಕೀಯವಾಗಿ
ಇನ್ನೂ ಹೆಚ್ಚಿಗೆ ಮಾಡಲು ಶಾಸಕನ್ನಾಗಿ ಆಯ್ಕೆ ಮಾಡುತ್ತಾರೆಂಬ ವಿಶ್ವಾಸ ಇದೆಯೆಂದು ಹೇಳಿದರು.

ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಹಕಾರದೊಂದಿಗೆ ಈಗಾಗಲೇ ಕ್ಷೇತ್ರದ ಸುಮಾರು 50 ಸಾವಿರ ಕುಟುಂಬಗಳ ಮನೆ ಮನೆಗೆ ಭೇಟಿ ನೀಡಿ ನನ್ನ ಮುಂದಿ ಯೋಜನೆಗಳ ಹಾಗೂ ಪಕ್ಷದ ಪ್ರಣಾಳಿಕೆಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದ್ದೇನೆ ಹಾಗೂ ಅವರ ಸಮಸ್ಯೆಗಳ ಬಗ್ಗೆ ಆಲಿಸಿ ಪಟ್ಟಿ ಮಾಡಿ ಕೊಂಡಿದ್ದೇವೆ. ಜನತೆ ಅಧಿಕಾರ ನೀಡಿದ ದಿನದಿಂದಲೇ ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಸುವ ಬಗ್ಗೆ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ರಶ್ಮಿ ರಾಮೇಗೌಡ ಮಾತನಾಡಿ, ಸ್ಥಳೀಯರಾಗಿ ಕಳೆದ 20 ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿರುವ ನಿಮ್ಮ ಮನೆ ಮಗನಂತಿರುವ ನಮ್ಮಗಳ ಸೇವಕ ನಮ್ಮ ಯಜಮಾನರಾದ ರಾಮೇಗೌಡರಿಗೆ ಒಂದು ಅವಕಾಶ ನೀಡಿ ನಿಮ್ಮಗಳ ಸೇವೆಗೆ ಅನುವು ಮಾಡಿ ಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಚಂದ್ರಶೇಖರ್ ಗೌಡ, ಬಿಕೆ.ನಾರಾಯಣಸ್ವಾಮಿ, ಡಿಕೆ .ರಮೇಶ್, ಆನಂದ್, ಮಂಜುನಾಥ್, ವಿಜಯ್ ಕುಮಾರ್, ನಿಖಿಲ್ ಗೌಡ, ಸಂಪತ್, ಸಂಜು, ಸಂದೀಪ್, ಚೋಟುಬಾಯ್, ಸುಮಂಗಳ, ಮಂಗಳಮ್ಮ, ಸೇರಿದಂತೆ ಇನ್ನಿತರರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ