Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಗಾರಪೇಟೆ, ಕ್ಯಾಸಂಬಳ್ಳಿ  ನೂತನ ಪೊಲೀಸ್ ಠಾಣೆ ಕಟ್ಟಡಗಳ ಉದ್ಘಾಟನೆ

ಸುದ್ದಿಮೂಲ ವಾರ್ತೆ
ಕೆಜಿಎಫ್., ಏ. 12:  ನೂತನವಾಗಿ ನಿರ್ಮಿಸಿರುವ ಕ್ಯಾಸಂಬಳ್ಳಿ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗಳ ಕಟ್ಟಡಗಳನ್ನು ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ಬುಧವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ರವಿಕಾಂತೇಗೌಡ, ಕಳೆದ ಒಂದು ದಶಕದಿಂದ ಪೊಲೀಸ್ ಠಾಣೆಗಳ ಉತ್ತಮ ಕಟ್ಟಡಗಳನ್ನು ನಿರ್ಮಿಸುವಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮುಂದಾಗಿದೆ. ರಾಜ್ಯದಾದ್ಯಂತ ಪ್ರತಿ ವರ್ಷ ನೂರಾರು ನೂತನ ಪೊಲೀಸ್ ಠಾಣಾ ಕಟ್ಟಡಗಳನ್ನು ಪೊಲೀಸ್ ವಸತಿ ನಿಗಮದ ವತಿಯಿಂದ ನಿರ್ಮಿಸಿ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕ್ಯಾಸಂಬಳ್ಳಿ, ಬಂಗಾರಪೇಟೆ ಪೊಲೀಸ್ ಠಾಣೆಗಳಿಗೆ ಹೊಸದಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಠಾಣೆಗೆ ಬರುವಂತಹ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಲಹೆ ನೀಡಿದರು.

ಪೊಲೀಸರು ಕರ್ತವ್ಯದಲ್ಲಿರುವಾಗ ತಾಳ್ಮೆಯನ್ನು ಮೈಗೂಡಿಸಿಕೊಂಡು, ಸಾರ್ವಜನಿಕರ ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ತಮ್ಮ ಸೇವೆಯನ್ನು ದಕ್ಷತೆಯಿಂದ, ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಎಂದರು.

ಕೋಲಾರ ಜಿಲ್ಲಾಧಿಕಾರಿ ಎಂ.ನಾರಾಯಣ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಧರಣೀದೇವಿ, ಪೊಲೀಸ್ ವಸತಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಭಾಗವಹಿಸಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ