Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದ್ರ ಚೂಡೇಶ್ವರ ಸ್ವಾಮಿ ದೇವಾಲಯದ ರಾಜಗೋಪುರ ಪ್ರತಿಷ್ಠಾಪನೆ

ಸುದ್ದಿಮೂಲ ವಾರ್ತೆ

ಆನೇಕಲ್‌,ಜೂ.21: ತಮಿಳುನಾಡು ಗಡಿಭಾಗದ ಹೊಸೂರಿನಲ್ಲಿ ಜೂ. 28 ರಂದು ಮರಕತಾಂಬಿಕಾ ಸಮೇತ ಚಂದ್ರ ಚೂಡೇಶ್ವರ ಸ್ವಾಮಿ ದೇವಾಲಯದ ರಾಜಗೋಪುರ ಪ್ರತಿಷ್ಠಾಪನೆ ಹಾಗೂ ಕುಂಬಾಭೀಷೇಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಾಜಗೋಪುರ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಯಿತು.

ಶ್ರೀ ಕೃಷ್ಣ ದೇವರಾಯನ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಾಲಯಲ್ಲಿ ಚಂದ್ರ ಚೂಡೇಶ್ವರ ಸ್ವಾಮಿ ಉದ್ಭವ ಮೂರ್ತಿಯಾಗಿ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಇತಿಹಾಸದಲ್ಲಿ ಚೋಳರು ಹಾಗೂ ಪಾಂಡ್ಯರ ಆಳ್ವಿಕೆಯಲ್ಲಿ ದೇವಾಲಯವನ್ನು ಅಭಿವೃದ್ದಿಪಡಿಸಲಾಗಿತ್ತು.

ಈಗ 2011 ರಲ್ಲಿ ದೇವಾಲಯದ ರಾಜ ಗೋಪುರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ 12 ವರ್ಷಗಳ ಕಾಲ ಕಾಮಗಾರಿ ನಡೆಸಿ, ಈಗ ಮಹಾ ರಾಜಗೋಪುರದ ಪ್ರತಿಷ್ಟಾಪನೆ ಹಾಗೂ ಕುಂಬಾಭಿಷೇಕ ಕಾರ್ಯವನ್ನು ಲಕ್ಷಾಂತರ ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಜೂ. 26 ಹಾಗೂ 27 ರಂದು ಎರಡು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನ ನಡೆಸಲಾಗುತ್ತಿದೆ. ಜೂನ್ 28 ಬೆಳ್ಳಗೆ 9 ರಿಂದ 10.30 ಗಂಟೆಗೆ ಶುಭಲಗ್ನದಲ್ಲಿ ರಾಜಗೋಪುರ ಪ್ರತಿಷ್ಠಾಪನೆ ಹಾಗೂ ಕುಂಬಾಭೀಷೇಕ ನಡೆಸಲು ತಿರ್ಮಾನಿಸಲಾಗಿದೆ.

ಕರ್ನಾಟಕ , ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಹಲವು ಕುಟುಂಬಗಳಿಗೆ ಚಂದ್ರ ಚೂಡೇಶ್ವರ ಸ್ವಾಮಿ ಕುಲದೇವತೆಯಾಗಿದೆ. 125 ಅಡಿ ಎತ್ತರದ 7 ಅಂತಸ್ತಿನ ಮಹಾರಾಜ ಗೋಪುರ ಪ್ರತಿಷ್ಠಾಪನೆಗೆ ಎಲ್ಲಾ ಸುತ್ತಮುತ್ತಲ ಭಕ್ತಾದಿಗಳು ಆಗಮಿಸಿ, ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ