Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಪ್ರವಾಸಿತಾಣ

ಸುದ್ದಿಮೂಲವಾರ್ತೆ

ಕೊಪ್ಪಳ ಜು 25: ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರದಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ.

ಕಳೆದ ವಾರ ತಳಮಟ್ಟ ಸೇರಿದ್ದ ತುಂಗಭದ್ರಾ ಜಲಾಶಯದಲ್ಲಿ ಈಗ 31.166 ಟಿಎಂಸಿ ನೀರು ಸಂಗ್ರಹವಾಗಿದೆ. ನಿನ್ನೆ ಒಂದೇ ದಿನದಲ್ಲಿ 5.5 ಟಿಎಂಸಿ ನೀರು ಸಂಗ್ರಹವಾಗಿದೆ.

ಇಂದು ಮುಂಜಾನೆಯ ವೇಳೆಗೆ ಜಲಾಶಯಕ್ಕೆ 72826 ಕ್ಯೂಸೆಕ್ ನೀರು ಹರಿದು ಬರುತ್ತಿದೆ.ಕಳೆದ ಒಂದು ವಾರದಲ್ಲಿ 26 ಟಿಎಂಸಿ ನೀರು ಸಂಗ್ರಹವಾಗಿದ್ದು

ರೈತರಲ್ಲಿ ಆಶಾಭಾವನೆ ಮೂಡಿದೆ.

ಕಳೆದ ವರ್ಷ ಜುಲೈ 12 ಕ್ಕೆ ಜಲಾಶಯ ಭರ್ತಿಯಾಗಿ ನದಿಗೆ ನೀರು ಬಿಡಲಾಗಿತ್ತು. ಆದರೆ ಈಗ ಜುಲೈ ಅಂತ್ಯಕ್ಕೆ ಇನ್ನೂ ಶೇ 25 ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಟ್ಟು 106.766 ಟಿಎಂಸಿ ಸಂಗ್ರಹವಾಗುತ್ತದೆ. ಜಲಾಶಯ

ಇಂದು ಒಳಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿರುವ ಹಿನ್ನಲೆ ಜಲಾಶಯವು ಈಗ ಪ್ರವಾಸಿತಾಣವಾಗಿದೆ.

ಮುನಿರಾಬಾದ್ ಹಾಗು ಹೊಸಪೇಟೆ ಕಡೆಯಿಂದ ನಿತ್ಯ ಹಲವರು ಜೋಡಿಯಾಗಿ ಆಗಮಿಸಿ ಜಲಾಶಯದ ಜಲರಾಶಿಯನ್ನು ನೋಡಿ ಆನಂದಿಸುತ್ತಿದ್ದಾರೆ.ಜಲಾಶಯದ ನೀರಿನ ಹತ್ತಿರ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುವ ಸಂಭ್ರಮಿಸುತ್ತಿದ್ದಾರೆ. ನೀರಿನ ತೆರೆಯಲ್ಲಿ ನಿಂತು ಖುಷಿ ಪಟ್ಟು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ತುಂಗಭದ್ರಾ ಜಲಾಶಯ

ಕೊಪ್ಪಳದ ಮುನಿರಾಬಾದ್ ಹಾಗು ಹೊಸಪೇಟೆ ಮಧ್ಯೆ ಇರುವ ತುಂಗಭದ್ರಾ ಜಲಾಶಯ

ಮಳೆಯ ಮಧ್ಯೆ ಜಲಾಶಯ ನೋಡಲು ಜನರು ಆಗಮಿಸಿ ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ ಈ ಬಾರಿ ಮುಂಗಾರು ಹಂಗಾಮಿನ ಬೆಳೆಗೆ ನೀರು ಸಿಗುವುದು ಅನುಮಾನ ಎಂಬಂತೆ ಇತ್ತು. ಈಗ ಮಳೆಯಾಗುತ್ತಿರುವುದು ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆಶಾಭಾವನೆ ಮೂಡಿದೆ.

ಈ ಮಧ್ಯೆ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಈಗ ಬೇಗ ಐಸಿಸಿ ಸಭೆ ನಡೆಸಿ ರೈತರ ಭೂಮಿಗೆ ನೀರು ಹಾಯಿಸಬೇಕು. ತಡವಾದಷ್ಟು ಭತ್ತ ಸೇರಿ ವಿವಿಧ ಬೆಳೆಗೆ ಉತ್ತಮ ವಾತವರಣವಿರುವುದಿಲ್ಲ. ಈ ಹಿನ್ನಲೆಯಲ್ಲಿ ಐಸಿಸಿ ಸಭೆ ನಡೆಸಬೇಕೆಂದು ರೈತ ಹಾಗು ಕಾಂಗ್ರೆಸ್ ಮುಖಂಡ ಶ್ರೀರಾಮನಗರದ ರಡ್ಡಿ ಶ್ರೀನಿವಾಸ ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ