Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡತನ ಹೊಗಲಾಡಿಸಲು ಅಂತರ್ಗತ ಸಾಮರ್ಥ್ಯ ಮುಖ್ಯ: ಮುನಿರಾಜ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಜು 3 : ನಗರದ ಸಂತೆ ಮೈದಾನದಲ್ಲಿ ಇಂದು ಕರ್ನಾಟಕ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಮತ್ತು ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಹಯೋಗದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಮಾರಾಟ ಮೇಳ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬಡವರಿಗೆ ಬಡತನದಿಂದ ಪಾರಾಗುವ ಅಪೇಕ್ಷೆ ಇದೆ. ಬಡವರ ಸಹಜ ಸಾಮರ್ಥ್ಯಗಳನ್ನು ಅನಾವರಣಗೊಳಿಸಲು, ಸಾಮಾಜಿಕ ಸಜ್ಜುಗೊಳಿಸುವಿಕೆ ಮತ್ತು ಬಲವಾದ ಸಂಸ್ಥೆಗಳು ಅವಶ್ಯಕ. ಬಡ ಕುಟುಂಬಗಳಿಗೆ ಲಾಭದಾಯಕ ಸ್ವ-ಉದ್ಯೋಗ ಮತ್ತು ಕೌಶಲ್ಯಪೂರ್ಣ ವೇತನ ಉದ್ಯೋಗಾವಕಾಶಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುವ ಮೂಲಕ ಬಡತನವನ್ನು ಕಡಿಮೆ ಮಾಡುವುದು, ಬಡವರ ಬಲವಾದ ತಳಮಟ್ಟದ ಸಂಸ್ಥೆಗಳನ್ನು ನಿರ್ಮಿಸುವ ಮೂಲಕ ಸುಸ್ಥಿರ ಆಧಾರದ ಮೇಲೆ ಅವರ ಜೀವನೋಪಾಯದಲ್ಲಿ ಗಮನಾರ್ಹ ಸುಧಾರಣೆಯನ್ನು ಉಂಟುಮಾಡುತ್ತದೆ.

ನಗರಸಭೆ ಕಮಿಷನರ್ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ, ವಾರ್ಡ್ ಕೌನ್ಸಿಲರ್ ಸುರೇಶ್, ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಲತಾ, ಎನ್ ಆರ್ ಎಲ್ ಎಂ ಸಿಬ್ಬಂದಿ ಬಾಲರಾಜ, ನರಸಿಂಹ, ನಳಿನಿ, ಭಾಗ್ಯಲಕ್ಷ್ಮಿ, ಅಮರಾವತಿ ಮತ್ತು ತಾಲ್ಲೂಕಿನ ಎಲ್ಲಾ ಎಂಬಿಕೆ ಮತ್ತು ಎಲ್ ಸಿ ಆರ್ ಪಿ ಗಳು, ಕೃಷಿ ಸಖಿಗಳು, ಪಶು ಸಖಿಗಳು, ವನ ಸಖಿಗಳು, ಕೃಷಿ ಉದ್ಯೋಗ ಸಖಿಯವರು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ