Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸಿಎಂ ಆಗಿವೆ ಮುಂದುವರಿಯುತ್ತಾರೆ- ಜಗದೀಶ ಶೆಟ್ಟರ

ಸುದ್ದಿಮೂಲವಾರ್ತೆ

ಕೊಪ್ಪಳ ಜು 26: ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜನಸಂಘದಲ್ಲಿ ಯಾವುದೇ ಲಿಂಗಾಯತ್ ನಾಯಕರಿದ್ದಿಲ್ಲ ಆ ಕಾಲದಲ್ಲಿ ನಾವು ಸಂಘದಲ್ಲಿ ಇದ್ದೇವೆ. ಇದಕ್ಕೆ ನಾವು ಸಹ ಬೇಕಾಗುವಷ್ಟು ಕೆಲಸ ಮಾಡಿ ಹಿಂತಿರುಗಿಸಿದ್ದೇವೆ ಎಂದರು.

ಈಗ ಮತ್ತೆ ಬಿಜೆಪಿಗೆ ಹೋಗುವುದಿಲ್ಲ. ಅಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಈಗ ಯಾವ ಪಕ್ಷ ತತ್ವ ಸಿದ್ದಾಂತ ಉಳಿದುಕೊಂಡಿದೆ. ಜನಸಂಘದ ತತ್ವ ಸಿದ್ದಾಂತ ಈಗಿನ ಬಿಜೆಪಿಯಲ್ಲಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲಿಸಲು ಯತ್ನ ಮಾಡುತ್ತೇನೆ.ನನನ್ನು ಬಿಜೆಪಿ ಯಾವ ರೀತಿ ನಡೆಕೊಂಡರು. ಅಮಾವನಕರ ನಡೆಕೊಂಡರು. ಬಿಜೆಪಿ ಗೌರವ ನೀಡಿಲ್ಲ. ಪ್ರೀತಿ ವಿಶ್ವಾಸದಿಂದ ಕಾಂಗ್ರೆಸ್ ನಡೆಸಿಕೊಳ್ಳುತ್ತಿದೆ. ಹಠಕ್ಕೆ ಬಿದ್ದು ಸೋಲಿಸಲು ಹೋಗಿ ರಾಜ್ಯದಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ ಎಂದರು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡದಷ್ಟು ಶೋಚನಿಯ ಸ್ಥಿತಿಗೆ ಬಂದಿದೆ. ರಾಜ್ಯಾಧ್ಯಕ್ಷರ ಆಯ್ಕೆ ಮಾಡದಷ್ಟು ಅರಾಜಕತೆ ಉಂಟಾಗಿದೆ. ನಮ್ಮಂಥ ಹಿರಿಯರ ಹೊರಗೆ ಕಳುಹಿಸಿದ ನಂತರ ಏನಾಗಿದೆ ಎಂಬುವುದು ಗೊತ್ತಾಗುತ್ತದೆ.ಲೋಕಸಭೆಗೆ ಸ್ಪರ್ಧಿಸುವ ಕುರಿತು ಚರ್ಚೆಯಾಗಿಲ್ಲ. ಕಾಂಗ್ರೆಸ್ ಪರವಾಗಿ ಅಲೆ ಇದೆ. ಮುಂದಿನ ಲೋಕಸಭಾ ಚುನಾವಣೆ 15 ರಿಂದ 20 ಸ್ಥಾನ ಗೆಲ್ಲಲಿದೆ ಎಂದರು.

ಹಿರಿಯ ಶಾಸಕರು ಸಿಎಂ ಪತ್ರ ಬರೆದ ಹಿನ್ನೆಲೆ ಸಿಎಲ್ ಪಿ ಸಭೆಯಲ್ಲಿ ಎಲ್ಲಾ ನಿರ್ಧಾರವಾಗುತ್ತದೆ. ಅಲ್ಲಿ ಎಲ್ಲಾ ಚರ್ಚೆಯಾಗಿದೆ. ಬಿ ಆರ್ ಪಾಟೀಲ ಎನ್ನಲಾಗುವ ಪತ್ರ ಫೇಕ್ ಎಂದು ತಿಳಿಸಿದ್ದಾರೆ ಎಂದರು.

ಮಣಿಪುರ ಗಲಾಟೆ ನಿಯಂತ್ರಿಸಲು ಅಲ್ಲಿಯ ಸರಕಾರ ವಿಫಲವಾಗಿದೆ. ಬಿಜೆಪಿಯವರು ಸರಕಾರದ ಮುಖ್ಯಮಂತ್ರಿ ರಾಜಿನಾಮೆ ಪಡೆಯಬೇಕು. ಅಲ್ಲಿಯ ಸರಕಾರ ಶಾಂತಿ ಕಾಪಾಡಲು ವಿಫಲವಾಗಿದೆ ಎಂದರು.

ಡಿಜೆ ಹಳ್ಳಿ ಹಾಗು ಕೆಜೆ ಹಳ್ಳಿ ಗಲಭೆಯಲ್ಲಿ ಅಮಾಯಕರ ಮೇಲಿನ ಪ್ರಕರಣ ಹಿಂಪಡೆಯಲು ಶಾಸಕ ತನ್ವೀರ ಶೆಟ್ ಪತ್ರ ಕುರಿತು ಪ್ರತಿಕ್ರಿಯಿಸಿ ಇದಕ್ಕೆ ಗೃಹ ಇಲಾಖೆ ಇದೆ. ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜಶೇಖರ ಹಿಟ್ನಾಳ, ಅಂದಪ್ಪ ಜವಳಿ, ಶಿವಕುಮಾರ, ಗುರುರಾಜ ಹಲಗೇರಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ