Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ರೌಡಿಸಂ ಮಟ್ಟಹಾಕಿ: ಸಿದ್ದರಾಮಯ್ಯಗೆ ಮನವಿ ಮಾಡಿದ ಜನಾರ್ದನ ರೆಡ್ಡಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.29:
ಬಳ್ಳಾಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾಾನರ್ ವಿವಾದ, ಹಿಂಸಾಚಾರ ಹಾಗೂ ಗುಂಡಿನ ದಾಳಿ ಪ್ರಕರಣಕ್ಕೆೆ ಸಂಬಂಧಿಸಿದಂತೆ ವಿಧಾನಸಭೆ ಅಧಿವೇಶನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಿ ಅವರು ಅಕ್ಷರಶಃ ಗುಡುಗಿದ್ದಾರೆ. ಆಡಳಿತ ಪಕ್ಷದ ವೈಲ್ಯಗಳನ್ನು ಎತ್ತಿಿಹಿಡಿಯುತ್ತಲೇ, ಮುಖ್ಯಮಂತ್ರಿಿ ಸಿದ್ದರಾಮಯ್ಯನವರ ಬಗ್ಗೆೆ ಮೃದು ಧೋರಣೆ ತೋರಿದ ರೆಡ್ಡಿಿ, ’ರಾಜ್ಯದ ಒಳಿತಿಗಾಗಿ ನೀವೇ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಿಯಾಗಿ ಮುಂದುವರಿಯಿರಿ, ಆದರೆ ಬಳ್ಳಾಾರಿಯಲ್ಲಿ ನಡೆಯುತ್ತಿಿರುವ ಗನ್ ಮತ್ತು ಬಾಂಬ್ ಸಂಸ್ಕೃತಿಯನ್ನು ಮಟ್ಟಹಾಕಿ’ ಎಂದು ಮನವಿ ಮಾಡಿದರು.
ಸಿಎಂಗೆ ಪೂರ್ಣ ಅವಧಿಯ ಬೆಂಬಲ, ಡಿಸಿಎಂ ವಿರುದ್ಧ ಕಿಡಿ:
ಸದನದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿಿ, ಮುಖ್ಯಮಂತ್ರಿಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಮಹತ್ವದ ಹೇಳಿಕೆ ನೀಡಿದರು. ’ನೀವು ಪಾದಯಾತ್ರೆೆ ಮಾಡಿದ್ದೀರಿ, ಕಷ್ಟಪಟ್ಟು ಮೇಲೆ ಬಂದಿದ್ದೀರಿ. ನಾನು ಜೈಲಿಗೆ ಹೋಗುವುದು, ಮತ್ತೆೆ ಆಯ್ಕೆೆಯಾಗಿ ಬರುವುದು ಎಲ್ಲವೂ ಭಗವಂತನ ಇಚ್ಛೆೆ. ಆದರೆ, ನೀವು ಅಧಿಕಾರವನ್ನು ಬಳಸಿಕೊಂಡು ಅಭಿವೃದ್ಧಿಿ ಮಾಡಬೇಕು. ನೀವೇ ಮುಂದಿನ ಎರಡೂವರೆ ವರ್ಷಗಳ ಕಾಲವೂ ಸಿಎಂ ಆಗಿ ಮುಂದುವರಿಯಬೇಕು ಎಂದು ಕೈಜೋಡಿಸಿ ಕೇಳಿಕೊಳ್ಳುತ್ತೇನೆ’ ಎಂದರು.
ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ರೆಡ್ಡಿಿ, ’ಘಟನೆ ನಡೆದಾಗ ಸಿಎಂ ಅವರು ಗಂಭೀರವಾಗಿದ್ದರು, ಆದರೆ ಡಿಸಿಎಂ ಬಾಯಿಗೆ ಬಂದಂತೆ ಮಾತನಾಡಿದರು. ಬಳ್ಳಾಾರಿಗೆ ಬಂದು ಆರೋಪಿ ಶಾಸಕರ ಪರ ನಿಲ್ಲುತ್ತೇನೆ ಎಂದರು. ನಾನು ರಕ್ಷಣೆ ಕೇಳಿದರೆ ಅಮೆರಿಕಾದಿಂದ ರಕ್ಷಣೆ ಪಡೆಯಲಿ ಎಂದು ವ್ಯಂಗ್ಯವಾಡಿದರು’ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಬಳ್ಳಾಾರಿಯಲ್ಲಿ ಗನ್, ಬಾಂಬ್ ಮಾತಾಡುತ್ತಿಿದೆ :
ಬಳ್ಳಾಾರಿ ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಿಟ್ಟ ಜನಾರ್ದನ ರೆಡ್ಡಿಿ, ’ಬಳ್ಳಾಾರಿಯಲ್ಲಿ ಪ್ರಜಾಪ್ರಭುತ್ವವಿಲ್ಲ, ಅಲ್ಲಿ ಬಾಂಬು ಮತ್ತು ಗನ್ ಮಾತನಾಡುತ್ತಿಿದೆ. ನಾನು ಗಂಗಾವತಿಯಿಂದ ಬರುವಾಗ ಮನೆ ಮುಂದೆ ಬ್ಯಾಾರ್ನ ನೋಡಿದೆ. ಅದನ್ನು ತೆಗೆಯುವಂತೆ ಸೂಚಿಸಿದ್ದೆ. ಆದರೆ ಮತ್ತೆೆ 40 ಜನರು ಬಂದು ಬ್ಯಾಾರ್ನ ಕಟ್ಟಲು ಮುಂದಾದರು. ಪೊಲೀಸರಿಗೆ ಕರೆ ಮಾಡಿದರೂ ಪ್ರಯೋಜನವಾಗಲಿಲ್ಲ. ಇದು ಸ್ಪಷ್ಟವಾಗಿ ಗುಪ್ತಚರ ಇಲಾಖೆಯ ವೈಲ್ಯ’ ಎಂದು ಆರೋಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ