Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ನೂರಾರು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ : ಜಮೀರ್ ಅಹಮದ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.2: ಬಿಜೆಪಿ ಜತೆ ಜೆಡಿಎಸ್ ಮೈತ್ರಿಯಿಂದ ಬೇಸತ್ತಿರುವ ನೂರಾರು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಮೂಲಕ ಅವರೆಲ್ಲರನ್ನೂ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಚನ್ನಪಟ್ಟಣ ಮಾಜಿ ಶಾಸಕ ಅಶ್ವತ್, ಹಾಗೂ ಜಬಿ, ಜಿಯಾಜಿಲ್ಲಾಖಾನ್ ಸೇರಿದಂತೆ ನೂರಾರು ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಹಾಲಿ ಹಾಗೂ ಮಾಜಿ ಶಾಸಕರು, ಪಾಲಿಕೆ ಸದಸ್ಯರು ಸೇರಿ ಸಾವಿರಾರು ಮುಖಂಡರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಿದರು.

ರಾಮನಗರ, ಚನ್ನಪಟ್ಟಣ, ಹಾಸನ, ಮಂಡ್ಯ ಸಹಿತ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಅಲ್ಪಸಂಖ್ಯಾತರು ಸೇರಿ ಜಾತ್ಯತೀತ ಮನೋಭಾವವುಳ್ಳ ಮುಖಂಡರು ಬೇಸರಗೊಂಡು ನಮ್ಮ ಸಂಪರ್ಕ ದಲ್ಲಿದ್ದಾರೆ. ಅವರೆಲ್ಲರನ್ನೂ ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದರು.

ದೇವೇಗೌಡರು ಈಗಲೂ ಸೆಕ್ಯುಲರ್ ಆಗಲೂ ಸೆಕ್ಯುಲರ್. ಅವರಿಂದ ನಮ್ಮ ಸಮಾಜಕ್ಕೆ ನ್ಯಾಯ ಸಿಕ್ಕಿದೆ, ಎರಡನೇ ಹಂತದ ನಾಯಕರನ್ನೂ ಬೆಳೆಸಿದ್ದಾರೆ. ಆದರೆ ಕುಮಾರಸ್ವಾಮಿ ಸೆಕ್ಯುಲರ್ ಅಲ್ಲ. ಮುಸ್ಲಿಂ ಸಮುದಾಯದ ಮತ ನನಗೆ ಅನಿವಾರ್ಯವಾಗಿ ಹಾಕಿದರು ಎಂದು ಹೇಳಿರುವುದು ನೋವು ತಂದಿದೆ ಎಂ ಅವರು, ಗೆದ್ದಿದ್ದು 12 ಸಾವಿರ ಮತ ಅಂತರದಿಂದ, ಡಿ. ಕೆ. ಶಿವಕುಮಾರ್ ಅವರಂತೆ 1.20 ಲಕ್ಷ ಮತಗಳ ಅಂತರದಿಂದ ಅಲ್ಲ. ಮುಸ್ಲಿಂ ಸಮುದಾಯ ಮತ ಕೊಡದಿದ್ದರೆ ಏನಾಗುತ್ತಿತ್ತು ಎಂಬುದು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಎಚ್. ಡಿ. ಕುಮಾರಸ್ವಾಮಿ ಅವರ ಎಲ್ಲ ವಿದ್ಯೆ ನೋಡಿದ್ದೆ. ಆದರೆ, ಪ್ಯಾಂಟ್ ಒಳಗೆ ಆರ್ ಎಸ್ ಎಸ್ ಚಡ್ಡಿ ಹಾಕಿದ್ದು ಗೊತ್ತಿರಲಿಲ್ಲ ಎಂದು ಲೇವಡಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಜಮೀರ್ ಅಹಮದ್ ಖಾನ್ ಅವರ ಸಲಹೆ ಯಂತೆ ಅವರ ಮಾರ್ಗದರ್ಶನ ದಲ್ಲೇ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಜೆಡಿಎಸ್ ನಿಂದ ನಮ್ಮ ತತ್ವ ಸಿದ್ದಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಸಚಿವ, ರಾಮಲಿಂಗಾರೆಡ್ಡಿ, ಸಂಸದ ಡಿ. ಕೆ. ಸುರೇಶ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ