Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಂಟಿ ಪತ್ರಿಕಗೋಷ್ಠಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.5: ನಾನು ಏ.18ರಿಂದ 12-13 ಕ್ಷೇತ್ರಗಳ ಪ್ರಚಾರ ಮಾಡಿದ್ದು, ಕೆಲವು ಕಡೆಗಳಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಜತೆ ಮಾಡಿದ್ದೇವೆ. ಮುಂದಿನ ಎರಡು ಮೂರು ದಿನಗಳಲ್ಲಿ ನಾಲ್ಕೈದು ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದೇವೆ. ಕಳೆದ ಚುನಾವಣೆಯಲ್ಲಿ 60 ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳಲ್ಲಿ ತೆಲುಗು ಭಾಷಿಕರು ಹೆಚ್ಚಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಉಳಿದ 20 ಕ್ಷೇತ್ರದಲ್ಲಿ ಬಿಜೆಪಿ, 5 ಕ್ಷೇತ್ರಗಳಲ್ಲಿ ದಳ ಗೆದ್ದಿದೆ. ಈ ಬಾರಿ 60 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡಲಾಗುತ್ತಿದೆ.

ಈ ಚುನಾವಣೆಯಲ್ಲಿ ಎರಡು ವಿಚಾರಗಳು ಕಾಂಗ್ರೆಸ್ ಪರವಾಗಿ ಅಲೆ ಸೃಷ್ಟಿಸಿದೆ. ಒಂದು ರಾಹುಲ್ ಗಾಂಧಿ ಅವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ. ಸುಳ್ಳು ಕೇಸು, ನ್ಯಾಯಾಲಯ ದಾರಿ ತಪ್ಪಿಸಿ, ಶಿಕ್ಷೆ ಕೊಡಿಸಿ ಅವರನ್ನು ಅನರ್ಹರನ್ನಾಗಿ ಮಾಡಿದ್ದಾರೆ. ಇಂದಿರಾಗಾಂಧಿ ಅವರಿಗೆ ಮಾಡಿದ್ದನ್ನೇ ಈಗ ರಾಹುಲ್ ಗಾಂಧಿ ಅವರಿಗೆ ಮಾಡುತ್ತಿದ್ದು, ಅಂದು ಚಿಕ್ಕಮಗಳೂರಿನ ಜನ ಹೇಗೆ ಇಂದಿರಾ ಅವರಿಗೆ ಬೆಂಬಲ ನೀಡಿದರೋ, ಅದೇ ರೀತಿ ರಾಹುಲ್ ಗಾಂಧಿ ಅವರಿಗೆ ಪುನರಾವರ್ತನೆಯಾಗಲಿದೆ. ಕರ್ನಾಟಕದ ಜನ ಇಂತಹ ದಬ್ಬಾಳಿಕೆ ಸಹಿಸುವುದಿಲ್ಲ.

ಇನ್ನು ಎರಡನೇ ವಿಚಾರ ಗುಜರಾತ್ ಮಾಡೆಲ್ ಎನ್ನುತ್ತಿದ್ದಾಗ ಜನರಿಗೆ ಅರ್ಥವಾಗಿರಲಿಲ್ಲ. ಆದರೆ ಈಗ ಗುರಾತಿಗೆ ರಾಜ್ಯದ ಸಂಸ್ಥೆಗಳನ್ನು ವಿಲೀನ ಮಾಡುವುದು ಎಂಬುದು ಜನರಿಗೆ ಅರ್ಥವಾಗಿದೆ. ನಂದಿನಿ ಹೆಸರನ್ನು ನಾಶ ಮಾಡಿ ಅಮೂಲ್ ಸ್ಥಾಪನೆ ಮಾಡಲು ಸಂಚು ರೂಪಿಸಿರುವುದು ಗ್ರಾಮೀಣ ಭಾಗದಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಂದಿನಿ ಭಾವನಾತ್ಮಕವಾಗಿ ಜನರಿಗೆ ಹತ್ತಿರವಾಗಿದ್ದು, ಹೀಗಾಗಿ ಬಿಜೆಪಿ ಈಗ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ನೋಡಿದಾಗ ಈ ಬಾರಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಸ್ವಂತ ಬಲದ ಆಧಾರದ ಮೇಲೆ ಸರ್ಕಾರ ರಚನೆ ಆಗಲಿದೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ