Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣದಷ್ಟೇ ಕ್ರೀಡೆಯೂ ಮುಖ್ಯ : ಕೆ. ಷಡಕ್ಷರಿ

ಸುದ್ದಿಮೂಲ ವಾರ್ತೆ

ತಿಪಟೂರು,ಆ.22: ಶಿಕ್ಷಣ ಕ್ಷೇತ್ರ ಎಷ್ಟು ಮುಖ್ಯವೋ ಹಾಗೆಯೇ ಕ್ರೀಡಾ ಕ್ಷೇತ್ರವೂ ಅಷ್ಟೇಮುಖ್ಯ. ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗದೆ ಕ್ರೀಡೆಗಳಲ್ಲಿ ಭಾಗವಹಿಸುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲ್ಪತರು ನಗರಿ ತಿಪಟೂರು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಸಾಧ್ಯನೆ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಆಟಗಾರರಾಗಿ ಪ್ರತಿನಿಧಿಸಿ ಸಾಧನೆಗಳಿಸಿರುವ ನಿದರ್ಶನಗಳಿವೆ. ಇಂದಿನ ಪೀಳಿಗೆಯ ಮಕ್ಕಳು ಓದುವುದು ಮಾತ್ರವಲ್ಲದೇ ಕ್ರೀಡೆಗೂ ಹೆಚ್ಚು ಒತ್ತು ನೀಡಬೇಕು. ವಿರಾಮದ ಸಮಯದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸರಿಯಾದ ಅಭ್ಯಾಸ ಮಾಡಿದರೆ ಜಯ ನಿಮ್ಮದಾಗಲಿದೆ ಎಂದು ಕಿವಿ ಮಾತು ಹೇಳಿದರು.

ಇಂದಿನ ಕ್ರೀಡಾಕೂಟದಲ್ಲಿ 20ಕ್ಕೂ ಹೆಚ್ಚು ವಿವಿಧ ಕಾಲೇಜುಗಳಿಂದ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಸೋಲಿಗೂ ಕುಗ್ಗದೆ, ಗೆದ್ದಾಗ ಹಿಗ್ಗದೆ ಸಮಾನ ಮನಸ್ಸಿನಿಂದ ಕ್ರೀಡೆಯನ್ನು ಸ್ವೀಕರಿಸುವ ಮೂಲಕ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ಎಂದು ಶುಭ ಹಾರೈಸಿದರು.

ಷಡಕ್ಷರ ಮಠದ ಶ್ರೀ ರುದ್ರಮುನಿಸ್ವಾಮೀಜಿ, ಸದೃಢ ದೇಹ, ಆರೋಗ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿ, ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಕ್ರೀಡೆಯಲ್ಲಿ ಹೆಚ್ಚು ತರಬೇತಿ ಕೊಡಿಸುವ ಕೆಲಸವಾಗಬೇಕಿದೆ. ಕ್ರೀಡೆಯಲ್ಲಿಯೂ ಇತರೆ ಕ್ಷೇತ್ರಗಳಿಗಿಂತ ಹೆಚ್ಚು ಸಾಧನೆ ಮಾಡುವ ಅವಕಾಶವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಬೇಕು ಎಂದರು.

ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ನಗರಸಭಾ ಸದಸ್ಯೆ ಯಮುನಾ ಧರಣೇಶ್,ಕ್ರೀಡೆ ಉತ್ತಮ ಜೀವನ ಶೈಲಿ ಹಾಗೂ ನಾಯಕತ್ವಗುಣ ಬೆಳೆಯಲು ಕ್ರೀಡೆ ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಬೇಕು. ನಿಮ್ಮಲ್ಲಿರುವ ಕೀಳರಿಮೆ,

ಹಿಂಜರಿಕೆ ಬಿಟ್ಟು ಮುಕ್ತ ಮನಸ್ಸಿನಿಂದ ಕ್ರೀಡೆಯಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಸತತ ಪರಿಶ್ರಮ, ಶಿಸ್ತು ಇದ್ದರೆ ಸಾಧನೆ ಸುಲಭವಾಗಲಿದೆ ಎಂದರು.

ಕ್ರೀಡಾಕೂಟದಲ್ಲಿ ಬಾಲಕರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಹಾಗೂ ನೋಡಲ್ ಅಧಿಕಾರಿ ಎಂ.ಡಿ.ಶಿವಕುಮಾರ್, ಕ್ರೀಡಾಕೂಟದ ಸಂಚಾಲಕ ಜೆ.ಎಂ ಚಂದ್ರಶೇಖರ್, ಕ್ರೋಮ್ ಪಿಯು ಕಾಲೇಜಿನ ಪ್ರಾಂಶುಪಾಲ ವೈ.ಸಿ. ಪ್ರಕಾಶ್, ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಲ್. ಶೇಖರ್, ಬಾಲಕಿಯರ ಕಾಲೇಜಿನ ಪ್ರಾಂಶುಪಾಲ ಪರಮಶಿವಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ದೈಹಿಕಶಿಕ್ಷಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ