Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರುನಲ್ಲಿ ʼಕನ್ನಡಾಂಬೆ ಭುವನೇಶ್ವರಿʼ ಕಂಚಿನ ಪ್ರತಿಮೆ!

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.7:25 ಅಡಿಯ ಭುವನೇಶ್ವರಿ ಕಂಚಿನ ಪ್ರತಿಮೆ  ಅಧಿಕಾರಿಗಳು, ಶಿಲ್ಪಿಗಳ ಜತೆ ಸಭೆ ನಡೆಸಿದ ಸಚಿವ ಶಿವರಾಜ್ ತಂಗಡಗಿ 2024 ನವೆಂಬರ್ ನಲ್ಲಿ ಪ್ರತಿಮೆ ಅನಾವರಣಕ್ಕೆ ತೀರ್ಮಾನ ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡಾಂಬೆಗೆ ನಿತ್ಯ ಅರ್ಚನೆ ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಿದ್ದು, ಇನ್ನು ಮುಂದೆ ನಾಡದೇವಿ “ಭುವನೇಶ್ವರಿ”ಗೆ ನಿತ್ಯ ಅರ್ಚನೆ ನೆರವೇರಲಿದೆ.

ಕನ್ನಡಾಂಬೆಯ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿನೂತನ ಯೋಜನೆ ರೂಪಿಸಿದ್ದು, ಹದಿನಾಲ್ಕು ತಿಂಗಳಲ್ಲಿ ಪ್ರತಿಮೆಗೆ ಅಂತಿಮ ಸ್ಪರ್ಶ ದೊರಕಲಿದೆ.

ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ಸ್ಥಾಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ತಿಂಗಳಲ್ಲಿ ಎರಡು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿ ನಿರ್ಮಾಣ ಸಂಬಂಧ ತುರ್ತು ಕ್ರಮವಹಿಸುವಂತೆ ಸೂಚಿಸಿದ್ದಾರೆ.

25 ಅಡಿ ಕಂಚಿನ ಪ್ರತಿಮೆ: ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆ ಸ್ಥಳದಲ್ಲಿ ಪ್ರವಾಸಿಗರನ್ನು ಸೆಳೆಯುವಂತಹ ನಿಟ್ಟಿನಲ್ಲಿ ಉದ್ಯಾನವನ ನಿರ್ಮಾಣ ಹಾಗೂ ವಿಗ್ರಹದೊಂದಿಗೆ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ, ಗತಕಾಲದ ಹೆಮ್ಮೆಯ ವಿಷಯಗಳನ್ನು ಪ್ರತಿಬಿಂಬಿಸುವ ಚಿತ್ರಣ ಇಲ್ಲಿರಲಿದ್ದು, ಅವು ಜನರಿಗೆ ಮಾಹಿತಿ ನೀಡಲಿವೆ.

ಶಿಲ್ಪಿಗಳ ಜತೆ ಸಭೆ: ಈ ಸಂಬಂಧ ವಿಕಾಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿಗಳ ಜತೆ ಗುರುವಾರ ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಒಂದು ವರ್ಷದಲ್ಲಿ ಪ್ರತಿಮೆ ಕಾರ್ಯ ಪೂರ್ಣಗೊಂಡು ಮುಂದಿನ 2024ರ ನವೆಂಬರ್ 1ಕ್ಕೆ ಅನಾವರಣಗೊಳ್ಳಬೇಕು. ಮೊದಲಿಗೆ ಎರಡು ಅಡಿಯ ಕನ್ನಡಾಂಬೆಯ ಮಾದರಿ ಪ್ರತಿಮೆಯನ್ನು ನಿರ್ಮಿಸಿ ಕೊಡಬೇಕು. ನಂತರ ತ್ರಿಡಿ ಮಾದರಿಯ ಕನ್ನಡಾಂಬೆಯ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ತುರ್ತು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಲಾವಿದ ಕೆ.ಸೋಮಶೇಖರ್ ಸಿದ್ಧಪಡಿಸಿರುವ ನಾಡದೇವಿಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಲಲಿತಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಅಧ್ಯಕ್ಷತೆಯ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದೇ ಮಾದರಿಯ ನಾಡದೇವಿಯ ಸುಮಾರು 25 ಅಡಿಯ ಪ್ರತಿಮೆ ತಲೆ ಎತ್ತಲಿದೆ.

ಪ್ರತಿಮೆ ನಿರ್ಮಾಣ ಯೋಜನೆಗೆ ಸಿಎಂರಿಂದ ಚಾಲನೆ

ಕಂಚಿನ ಬೃಹತ್ ವಿಗ್ರಹ ನಿರ್ಮಾಣ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ವರ್ಷ ನವೆಂಬರ್ 1ಕ್ಕೆ ಮುಖ್ಯಮಂತ್ರಿಗಳಿಂದಲೇ ಪ್ರತಿಮೆ ಅನಾವರಣ ಮಾಡಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಮುಂದಿನ 2024ರ ನವೆಂಬರ್ ವೇಳೆಗೆ ಪ್ರತಿಮೆ ಕಾಮಗಾರಿ ಪೂರ್ಣಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರತಿಮೆ ಅನಾವರಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು

ಸಚಿವರ ನೇತೃತ್ವದಲ್ಲಿ ಎರಡು ಬಾರಿ ಸಭೆ ನಡೆಸಿದ್ದು, ಕನ್ನಡಭವನದ ಆವರಣದಲ್ಲಿ ಪ್ರತಿಮೆ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ. ಒಂದು ತಿಂಗಳಲ್ಲಿ ಎರಡು ಅಡಿಯ ಮಾದರಿ ಭುವನೇಶ್ವರಿ ಪ್ರತಿಮೆ ಮಾಡಿಕೊಡುವಂತೆ ಶಿಲ್ಪಿಗಳಿಗೆ ಸೂಚಿಸಲಾಗಿದೆ.*

ವಿಶ್ವನಾಥ್ ಹಿರೇಮಠ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ