Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಕುರ್ಚಿ ಕದನ: ಅಧಿಕಾರ ಹಂಚಿಕೆ ಈಗ ಸಮುದಾಯಗಳ ನಡುವಿನ ವಾದ-ಪ್ರತಿವಾದ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.28:
ಕಾಂಗ್ರೆೆಸ್ ಹೈಕಮಾಂಡ್ ಕರ್ನಾಟಕದ ಕುರ್ಚಿ ಕದನದ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದ್ದರಿಂದಾಗಿ, ಪರಿಸ್ಥಿಿತಿ ಗಂಭೀರ ಸ್ವರೂಪಕ್ಕೆೆ ತಿರುಗಿದ್ದು ಸಮುದಾಯವಾರು ಶಾಸಕರು ಪರೋಕ್ಷವಾಗಿ ರಾಜೀನಾಮೆಯ ಬೆದರಿಕೆ ಹಾಕಿಒದ್ದಾರೆ.
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಿ ಮಾಡದೇ ಇದ್ದರೆ, ಒಕ್ಕಲಿಗ ಸಮುದಾಯದ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಮುದಾಯದಿಂದ ಒಂದು ವೋಟು ಕೂಡ ಕಾಂಗ್ರೆೆಸ್‌ಗೆ ಬರುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಇತ್ತ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಸಂಘಟನೆಗಳು, ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆೆ ನಿಂತಿದ್ದು, ನಾಯಕತ್ವ ಬದಲಾವಣೆ ಮಾಡಿದರೆ, ಅಹಿಂದ ವರ್ಗದ 80ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಪರಿಸ್ಥಿಿತಿ ದಿನದಿಂದ ಗಂಭೀರ ಸ್ವರೂಪಕ್ಕೆೆ ತಿರುಗುತ್ತಿಿದೆ. ಕಳೆದ ನಾಲ್ಕೈದು ತಿಂಗಳಿನಿಂದ ನಾಯಕತ್ವ ಬದಲಾವಣೆ ವಿಚಾರವಾಗಿ ಮುಸುಕಿನ ಗುದ್ದಾಟ ನಡೆದೇ ಇದೆ. ಆದರೆ ಹೈಕಮಾಂಡ್ ಕಾಂಗ್ರೆೆಸ್ ಪಕ್ಷಕ್ಕೆೆ ಸ್ಪಷ್ಟ ಬಹುಮತ ಇದೆ. ಯಾರು ಏನೂ ಮಾಡಿಕೊಳ್ಳಲಾಗುವುದಿಲ್ಲ ಎಂಬ ಉಡೊಯಲ್ಲಿ ಭಿನ್ನ ರಾಗಗಳನ್ನು ಕಡೆಗಣಿಸಿತು ಎಂದು ಹೇಳಲಾಗಿದೆ.
ಇತ್ತೀಚೆಗೆ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ಭೇಟಿ ನೀಡಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆೆ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಪಡೆಯುವ ಪ್ರಯತ್ನ ಮಾಡಿದರು. ಆದರೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ, ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ಭೇಟಿಗೆ ಮಾತ್ರ ಅವಕಾಶ ನೀಡಿ, ಡಿ.ಕೆ.ಶಿವಕುಮಾರ್ ಭೇಟಿಗೆ ಸಮಯ ನೀಡಲಿಲ್ಲ. ಇದು ಡಿ.ಕೆ.ಶಿವಕುಮಾರ್ ಅವರನ್ನು ಕೆರಳಿಸಿದೆ ಎಂದು ಹೇಳಲಾಗಿದೆ.
ಆ ಬಳಿಕ ಶಾಸಕರ ದೆಹಲಿಯಾತ್ರೆೆಗಳು, ಡಿ.ಕೆ.ಶಿವಕುಮಾರ್ ಅವರ ತೆರೆಮರೆ ರಹಸ್ಯ ಕಾರ್ಯಕ್ರಮಗಳು ಚುರುಕು ಪಡೆದುಕೊಂಡಿವೆ. ಈವರೆಗೂ ಕಾಂಗ್ರೆೆಸ್‌ನ ಆಂತರಿಕ ವಿಚಾರವಾಗಿದ್ದ ಅಧಿಕಾರ ಹಂಚಿಕೆ ಈಗ ಸಮುದಾಯಗಳ ನಡುವಿನ ವಾದ-ಪ್ರತಿವಾದಕ್ಕೆೆ ಕಾರಣವಾಗಿವೆ.
ಸಿದ್ದರಾಮಯ್ಯ ಅವರ ಬಣದಲ್ಲಿರುವ ಕೆಲವು ಸಚಿವರು ಹಿಂದುಳಿದ ವರ್ಗ ಮತ್ತು ಶೋಷಿತ ಸಮುದಾಯಗಳ ಪ್ರಮುಖರೆಂಬಂತೆ ಬಿಂಬಿಸಿಕೊಂಡಿದ್ದಾರೆ. ರಾಜಕೀಯ ಬಿಕ್ಕಟ್ಟಿಿನ ಸಂದರ್ಭದಲ್ಲಿ ಈ ಸಚಿವರು ಮತ್ತು ಪ್ರಮುಖ ನಾಯಕರು, ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳನ್ನು ಸಿದ್ದರಾಮಯ್ಯ ಅವರ ಬೆಂಬಲಕ್ಕೆೆ ನಿಲ್ಲುವಂತೆ ಪ್ರೆೈರೇಪಿಸುತ್ತಿಿದ್ದಾರೆ.
ಡಿ.ಕೆ.ಶಿವಕುಮಾರ್ ತಾವು ಬಹಿರಂಗವಾಗಿ ಏನೂ ಹೇಳದೇ ಇದ್ದರೂ, ಆಂತರಿಕವಾಗಿ ತಮ್ಮದೇ ಆದ ಕಾರ್ಯಚರಣೆಗಳನ್ನು ಅನುಸರಿಸುತ್ತಿಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಬಣದ ಹಲವು ಸಚಿವರು ಹಾಗೂ ಪ್ರಬಲ ನಾಯಕರನ್ನು ಭೇಟಿ ಮಾಡಿ ಬೆಂಬಲಯಾಚಿಸಿದ್ದಾರೆ. ಡಿ.ಕೆ. ಬಣದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಒತ್ತಡ ಹೇರುವ ಪ್ರಯತ್ನ ಮಾಡಿದ್ದಾರೆ. ಅಷ್ಟಕ್ಕೆೆ ಸುಮನಾಗದ ಡಿ.ಕೆ.ಶಿವಕುಮಾರ್ ಮಹಾರಾಷ್ಟ್ರಕ್ಕೆೆ ತೆರಳಿ, ಅಲ್ಲಿ ರಾಹುಲ್‌ಗಾಂಧಿ ಅವರ ಆಪ್ತರೂ ಸೇರಿದಂತೆ ಕಾಂಗ್ರೆೆಸ್ ನಾಯಕರನ್ನು ಭೇಟಿ ಮಾಡಿ ತಮ ಪರವಾದ ಲಾಬಿ ಆರಂಭಿಸುವುದಾಗಿ ತಿಳಿದು ಬಂದಿದೆ.
ದೆಹಲಿಯಲ್ಲಿ ಈಗಾಗಲೇ ಸರಣಿ ಸಭೆಗಳು ಆರಂಭಗೊಂಡಿವೆ. ಬಿಹಾರದ ವಿಧಾನಸಭೆ ಚುನಾವಣೆಯ ಲಿತಾಂಶ ವಿಶ್ಲೇಷಣೆಗೆ ನಿನ್ನೆೆ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು. ಅಲ್ಲಿ ಬಿಹಾರದ ಚುನಾವಣೆ ಚರ್ಚೆ ಬಳಿಕ ರಾಜ್ಯದ ಬೆಳವಣಿಗೆಗಳ ಬಗ್ಗೆೆಯೂ ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ವಿದೇಶದಿಂದ ಇಂದು ದೆಹಲಿಗೆ ಮರಳಲಿದ್ದು, ನಂತರ ನಡೆಯುವ ಸಭೆಯಲ್ಲಿ ರಾಜ್ಯ ರಾಜಕೀಯದ ಗೊಂದಲಗಳಿಗೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಕುರಿತಂತೆ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ