Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಜಿಎಫ್ ನಗರ ಸಭೆ ಪೌರಾಯುಕ್ತ ಪವನ್ ಕುಮಾರ್ ನಗರ ವೀಕ್ಷಣೆ

ಸುದ್ದಿಮೂಲ ವಾರ್ತೆ

ಕೆಜಿಎಫ್, ಆ. 2 : ನಗರಸಭೆ ಬಸ್ ನಿಲ್ದಾಣ ಮತ್ತು ಎಂಜಿ ಮಾರುಕಟ್ಟೆಗೆ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ಭೇಟಿ ನೀಡಿದರು.

ನಗರಸಭೆ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮರಿಚಿಕೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದನ್ನು ವೀಕ್ಷಣೆ ಮಾಡಿ ಕೂಡಲೇ ಸ್ವಚ್ಛತಾ ಕಾರ್ಯವನ್ನು ಆರಂಭಿಸುವಂತೆ ನಗರಸಭೆ ಸಿಬ್ಬಂದಿಗಳಿಗೆ ಸೂಚಿಸಿದರು.

ಅಂಗಡಿಗಳನ್ನು ಚರಂಡಿ ಮೇಲೆ ನಿರ್ಮಿಸಿ, ಚರಂಡಿ ನೀರು ಹೊರ ಬರುತ್ತಿತ್ತು. ಇದನ್ನು ವೀಕ್ಷಿಸಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಯಿತು. ನಂತರ ಹೋಟೆಲ್, ಸ್ವೀಟ್ ಶಾಪ್ ಬೇಕರಿಗಳಲ್ಲಿ ಸ್ವಚ್ಛತೆ ಇಲ್ಲದ ಮತ್ತು ಪ್ಲಾಸ್ಟಿಕ್ ಬಳಕೆಗೆ ದಂಡ ವಿಧಿಸಲಾಯಿತು.

ಎಂಜಿ ಮಾರುಕಟ್ಟೆಗೆ ಭೇಟಿ ನೀಡಿದ ಆಯುಕ್ತರು, ಕಸದ ವಿಲೇವಾರಿ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ರಸ್ತೆಯನ್ನು ಆಕ್ರಮಿಸಿಕೊಂಡಿದ್ದ ಅಂಗಡಿ ಮಾಲೀಕರಿಗೆ ಮತ್ತು ವರ್ತಕರಲ್ಲಿ ಅಂಗಡಿಗಳನ್ನು ರಸ್ತೆಯಲ್ಲಿಟ್ಟುಕೊಂಡರೆ ಗ್ರಾಹಕರಿಗೆ ತೊಂದರೆಯಾಗುತ್ತದೆ. ಅಂಗಡಿ ವಸ್ತುಗಳನ್ನು ನೀವು ಅಂಗಡಿ ಒಳ ಭಾಗದಲ್ಲಿ ಇಟ್ಟುಕೊಳ್ಳಬೇಕೆಂದು ಅರಿವು ಮೂಡಿಸಿದರು. ಇದನ್ನು ಪುನಃ ಮುಂದುವರೆಸಿಕೊಂಡು ಹೋದರೆ ಅಂಗಡಿಗೆ ಬೀಗ ಹಾಕುವುದಾಗಿ ಎಚ್ಚರಿಸಿದರು.

ಎಂಜಿ ಮಾರುಕಟ್ಟೆ ಶೌಚಾಲಯ ಪಕ್ಕದಲ್ಲಿ ಕಸ ವಿಲೇವಾರಿ ಮಾಡದೆ ಇದ್ದಿದ್ದನ್ನು ಗಮನಿಸಿದರು. ನಗರಸಭೆ ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು. ಸಿಬ್ಬಂದಿಯವರು ಇಲ್ಲಿ ತೆಂಗಿನಕಾಯಿ ಮೂಟೆಗಳನ್ನು ಶೇಖರಣೆ ಮಾಡಿರುತ್ತಾರೆ. ನಗರಸಭೆ ಆಟೋ ಬರೋದಕ್ಕೆ ತೊಂದರೆ ಆಗುತ್ತದೆ ಎಂದು ಉತ್ತರಿಸಿದರು. ಕೂಡಲೇ ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಈ ತೆಂಗಿನಕಾಯಿ ಮೂಟೆಗಳನ್ನು ತೆರವುಗೊಳಿಸಬೇಕೆಂದು ಸೂಚಿಸಿದರು.

ನಗರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷರು ರಮೇಶ್ ಜೈನ್, ಆರೋಗ್ಯಧಿಕಾರಿ ಸರಸ್ವತಿ, ಮುರಳಿ ಆರ್ ಓ, ಮಂಜುನಾಥ್ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ