Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಖದೀಮರು

ಸುದ್ದಿಮೂಲ ವಾರ್ತೆ

ತುಮಕೂರು, ಅ.29 : ಮನೆಯಲ್ಲಿ ಯಾರೂ ಇಲ್ಲದನ್ನು ತಿಳಿದ ಕಳ್ಳರು ಬಾಗಿಲಿನ ಬೀಗ ಮುರಿದು ಕೈ ಚಳಕ ತೋರಲು ಹೋಗಿ ಸಿಕ್ಕಿ ಬಿದ್ದಿದ್ದಾರೆ.

ಹಾಡಹಗಲೇ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣವನ್ನೆಲ್ಲಾ ದೋಚುವಾಗಲೇ ಖದೀಮರಿಗೆ ಪೊಲೀಸರು ಲಾಕ್‌ ಹಾಕಿದ್ದಾರೆ. ತುಮಕೂರಿನ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ.

ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನೂ ಗಮನಿಸಿದ್ದಾರೆ. ಕೂಡಲೇ ಅಲರ್ಟ್‌ ಆದ ಅವರು ಕೈಗೆ ಗ್ಲೌಸ್‌ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ಕಾರಿನೊಳಗೆ ಕುಳಿತು ವಾಚ್‌ ಮಾಡುತ್ತಿದ್ದರು.

ಆದರೆ ಈ ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದನ್ನು ಕಂಡು ಮನೆಯ ಹೊರಗೆ ಕಾರಿನಲ್ಲಿ ಕುಳಿತಿದ್ದ ಇಬ್ಬರು ಖದೀಮರು ಪರಾರಿ ಆಗಿದ್ದಾರೆ.

ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಚಿನ್ನಾಭರಣವನ್ನೆಲ್ಲ ದೋಚಿಕೊಳ್ಳುತ್ತಿದ್ದ ಖದೀಮರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಡ್ರ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಧರ್ಮೇಶ್ ಮತ್ತು ಖಲೀಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಪೊಲೀಸರು ಸಿಕ್ಕ ಕಳ್ಳರನ್ನು ಸದೆಬಡಿದಿದ್ದಾರೆ.

ಖದೀಮನೊಬ್ಬ ಚಾಕುವಿನಿಂದ ತಾನೇ ಹೊಟ್ಟೆಗೆ ಚುಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾನೆ. ಸ್ಥಳೀಯರ ಸಹಾಯದೊಂದಿಗೆ ಸೆರೆ ಸಿಕ್ಕ ಇಬ್ಬರು ಖದೀಮರನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಬಂಧಿತರು ರಿಯಾದ್ ಮತ್ತು ಖಾಲಿದ್ ಎಂದು ತಿಳಿದು ಬಂದಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಮತ್ತಿಬ್ಬರು ಖದೀಮರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ