Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿಚ್ಚ ಸುದೀಪ್‍ಗೆ ಕಾಂಗ್ರೆಸ್‌, ಜೆಡಿಎಸ್‌ನಿಂದ ಅವಮಾನ: ಗೌರವ್ ಭಾಟಿಯ

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.8: ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಹೇಳಿದರು.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಮಗೆ ಬೇಕಾದಂತೆ ವಿಶ್ಲೇಷಿಸಿ ಬಳಸುತ್ತಾರೆ ಎಂದು ಟೀಕಿಸಿದರು.

ಕಿಚ್ಚ ಸುದೀಪ್ ಅವರು ಪ್ರಜಾಸತ್ತೆಯ ಸ್ವಾತಂತ್ರ್ಯದ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮತ್ತು ಬಿಜೆಪಿ ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಆದರೆ, ಇವೆರಡು ಪಕ್ಷಗಳು ಕಿಚ್ಚ ಸುದೀಪ್ ವಿರುದ್ಧ ಟೀಕೆ ಮಾಡುತ್ತಿವೆ. ವಿವಿಧ ಏಜೆನ್ಸಿಗಳಿಂದ ತನಿಖೆ ತಪ್ಪಿಸಿಕೊಳ್ಳಲು ಹೀಗೆ ಮಾಡಿದ್ದಾಗಿ ಟೀಕಿಸುತ್ತಿವೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಸಮರ್ಥನೆ ಮಾಡುವವರಾದರೆ ಅದು ಪ್ರಜಾಸತ್ತೆಗೆ ಪೂರಕ ಎನ್ನುವ ನಿಲುವು ಆ ಪಕ್ಷದ ಮುಖಂಡರದು. ಬಿಜೆಪಿಯಲ್ಲಿ ಪ್ರಚಾರಕ್ಕೆ ಹೊರಗಿನ ಅಗತ್ಯವಿದೆ ಎಂದು ಆಕ್ಷೇಪಿಸಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಿಚ್ಚ ಸುದೀಪ್ ಅವರಂಥ ಸಿನಿತಾರೆ ತಮ್ಮ ಬೆಂಬಲವನ್ನು ಯಾರಿಗೆ ಕೊಡಬೇಕೆಂದು ಆಯ್ಕೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಅಲ್ಲವೇ? ಎಂದು ಕೇಳಿದರು. ಬಿಜೆಪಿ ರಾಷ್ಟ್ರಪತಿ ಸ್ಥಾನವನ್ನು ಬುಡುಕಟ್ಟು ಸಮುದಾಯಕ್ಕೆ ಕೊಟ್ಟಿದೆ ಎಂದು ನೆನಪಿಸಿದರು.

ಡಿ.ಕೆ.ಶಿವಕುಮಾರ್, ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ತಮಗೆ ಬೆಂಬಲ ಕೊಡಲು ಕೋರಿದ್ದರು ಎಂಬ ಮಾಹಿತಿ ಇದೆ ಎಂದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರಕ್ಕೆ ಮತ್ತು ಕುಟುಂಬ ರಾಜಕೀಯಕ್ಕೆ ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.

ಈ ಚುನಾವಣಾ ಸಮರ ರಾಷ್ಟ್ರಹಿತ ವಿಚಾರಧಾರೆಯ ಆಧಾರದಲ್ಲಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು. ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮತ್ತು ರಾಜ್ಯ ಹಾಲು ಉತ್ಪಾದಕರ ಪ್ರಕೋಷ್ಠದ ರಾಜ್ಯ ಸಂಚಾಲಕ ವೆಂಕಟೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ